ರಾಜ್ಯ

ಸಿಎಂ ಮತ್ತು ಸರ್ಕಾರದ ಹಗರಣ ಮುಚ್ಚಿಕೊಳ್ಳಲು ನಾಗಮಂಗಲ ಗಲಭೆ ಸೃಷ್ಟಿ: ಎಚ್‌ಡಿ ಕುಮಾರಸ್ವಾಮಿ ಆರೋಪ

ಸರ್ಕಾರ ಮುಖ ಮುಚ್ಚಿಕೊಳ್ಳೋಕೆ ಎಸ್ ಐಟಿ ಆರೋಪ ಪಟ್ಟಿಗಳನ್ನು ಸೋರಿಕೆ ಮಾಡಲಾಗುತ್ತಿದೆ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಿತ್ಯವೂ ಕೇಳಿಬರುತ್ತಿರುವ ಭ್ರಷ್ಟಾಚಾರ ಹಗರಣಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರ ನಾಗಮಂಗಲ ಗಲಭೆಯನ್ನು ಸೃಷ್ಟಿಸಿರುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಶನಿವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೂಡಾ ಹಗರಣ, ಸರ್ಕಾರದ ಹಗರಣಗಳ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿಯೇ ಎಸ್ ಐಟಿ ತನಿಖೆಯ ಆರೋಪ ಪಟ್ಟಿಗಳ ಬಗ್ಗೆ, ವೈಯಕ್ತಿಕ ಚಾಟ್ ಬಗ್ಗೆ ಚರ್ಚೆ ಶುರುವಾಗುತ್ತದೆ. ಇದೆಲ್ಲಾ ಹೇಗೆ ಸಾರ್ವಜನಿಕವಾಗಿ ಬಹಿರಂಗವಾಗಲು ಸಾಧ್ಯ? ತನಿಖಾ ಸಂಸ್ಥೆಗಳೇ ಸೋರಿಕೆ ಮಾಡುತ್ತಿವೆ. ಜನರ ಗಮನವನ್ನು ಬೇರೆಡೆಗೆ ಹೊರಳಿಸಲು ಸರ್ಕಾರ ಇಂಥ ತಂತ್ರಗಾರಿಕೆ ಮಾಡುತ್ತಿದೆ ಎಂದು ದೂರಿದರು.

ನಾಗಮಂಗಲ ಘಟನೆಯಲ್ಲಿ ಅಮಾಯಕರನ್ನು ಬಂಧಿಸಿರುವದು ಸತ್ಯ ಎಂಬ ಸಚಿವ ಚಲುವರಾಯಸ್ವಾಮಿ ಅವರು ಒಪ್ಪಿಕೊಂಡಿದ್ದಾರೆ. ಮೊದಲು ಇದನ್ನು ಗೃಹ ಸಚಿವರು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದರು. ಎಫ್ಐಆರ್ ನಲ್ಲಿ ಕೋಮು ಗಲಭೆ ಅಂತ ಸೇರಿಸಿದ್ದಾರೆ. ನಮ್ಮನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ. ಮೂರು ಬಾರಿ ಗೃಹಮಂತ್ರಿ ಆಗಿದ್ದವರ ಅನುಭವ ಇದು. ವಿಷಯ ಹೇಳಬೇಕಾದರೇ ಮಾಹಿತಿ ಕ್ರೋಡೀಕರಿಸಿ ಹೇಳಬೇಕು. ಪಾಪ ಅವರು ಬಹಳ ದೊಡ್ಡವರು ಇದ್ದಾರೆ ಎಂದು ಕೇಂದ್ರ ಸಚಿವರು ಛೇಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗ ಅರಿವಾಗಿದೆ. ಅಲ್ಲಿ ಗಲಾಟೆ ಆಗಲಿಕ್ಕೆ ಅವಕಾಶ ಇರಲಿಲ್ಲ. ಇದ್ದಿದ್ದು 150 ಜನ, ನಿಯಂತ್ರಣ ಮಾಡಬಹುದಿತ್ತು. ಇಂತಹ ಪ್ರಕರಣ ನಡೆಯಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇದ್ದಂತಿದೆ. ಕಳೆದ ಮೂರು ತಿಂಗಳಲ್ಲಿ ಹಲವಾರು ವಿಚಾರಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದನ್ನು ನೋಡಿದ್ದೇನೆ. ಆರೋಪ ಪಟ್ಟಿ ಎಸ್ ಐಟಿ ಬಳಿ ಇರುತ್ತದೆ. ಅದು ಹೇಗೆ ಹೊರಗೆ ಸೋರಿಕೆ ಆಗುತ್ತದೆ? ಸರ್ಕಾರ ತಪ್ಪುಗಳನ್ನು ಮುಚ್ಚಿಕೊಳ್ಳಲು ಇಂಥ ಸೋರಿಕೆ ಮಾಡುತ್ತದೆ ಎಂದು ಅವರು ದೂರಿದರು.

ನಾನು ನಾಗಮಂಗಲ ತಾಲ್ಲೂಕು ಅಧ್ಯಕ್ಷನ ಹೆಸರು ಹೇಳಿಲ್ಲ. ಅವರ ಮಗನ ಹೆಸರು ಹೇಳಿಲ್ಲ. ಅಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಇದ್ದರು ಎಂದು ಹೇಳಿದ್ದೇನೆ. ಎಲ್ಲ ಜನಾಂಗ ಶಾಂತಿ ಕಾಪಾಡಿ ಎಂದು ನಾನು ಮನವಿ ಮಾಡಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮುನಿರತ್ನ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ

ಬಿಜೆಪಿ ಶಾಸಕ ಮುನಿರತ್ನ ಅವರು ಜಾತಿ ನಿಂದನೆ ಮಾಡಿದ್ದಾರೆ ಎನ್ನುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಬೆಳಗ್ಗೆಯಿಂದ ನಾನು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು, ಸಾರ್ವಜನಿಕರ ಅಹವಾಲು ಆಲಿಸುತ್ತಿದ್ದೇನೆ. ಹೀಗಾಗಿ ನನಗೆ ಏನೂ ಗೊತ್ತಿಲ್ಲ, ಯಾವುದೇ ಮಾಹಿತಿ ಇಲ್ಲ ಇಲ್ಲ ಎಂದರು ಕುಮಾರಸ್ವಾಮಿ ಅವರು.

ಕಾಂಗ್ರೆಸ್ ನವರು ನನ್ನನ್ನು ಯಾಕೆ ಪ್ರಶ್ನೆ ಮಾಡ್ತಾರೆ? ಅವರನ್ನು ನಾನು ಈಗಾಗಲೇ ಸಾವಿರಾರು ಪ್ರಶ್ನೆಗಳನ್ನು ಕೇಳಿದ್ದೇನೆ. ಮೊದಲು ಅವರ ಮುಖ್ಯಮಂತ್ರಿ ದಲಿತರ ನಿವೇಶನ ಹೊಡೆದುಕೊಂಡಿರುವ ಬಗ್ಗೆ ಉತ್ತರ ಕೊಡಲಿ. ಈ ರೀತಿಯ ಘಟನೆ ನಡೆದಿದ್ದರೆ ಕ್ರಮ ತೆಗೆದುಕೊಳ್ಳಬೇಕಿರೋದು ಸರ್ಕಾರ. ನಾನು ಕ್ರಮ ತೆಗೆದುಕೊಳ್ಳೋಕೆ ಆಗುತ್ತಾ? ಎಂದರು ಅವರು.

ನಾನು ಇಂತಹ ವಿಷಯಗಳಿಗೆ, ಅದರಲ್ಲಿಯೂ ಒಂದು ಸಮಾಜ ಬಗ್ಗೆ ಅವಹೇಳನ ಮಾಡೋದಕ್ಕೆ, ಹಿಂಸೆ ನೀಡೋಕೆ, ಭ್ರಷ್ಟ ವ್ಯವಸ್ಥೆಗೆ ಬೆಂಬಲ ಕೊಟ್ಟಿಲ್ಲ. ಸರ್ಕಾರ ಅವರ ಜವಾಬ್ದಾರಿ ನಿರ್ವಹಣೆ ಮಾಡಿಕೊಳ್ಳಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago