ಸರ್ಕಾರ ಮುಖ ಮುಚ್ಚಿಕೊಳ್ಳೋಕೆ ಎಸ್ ಐಟಿ ಆರೋಪ ಪಟ್ಟಿಗಳನ್ನು ಸೋರಿಕೆ ಮಾಡಲಾಗುತ್ತಿದೆ
ಬೆಂಗಳೂರು: ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಿತ್ಯವೂ ಕೇಳಿಬರುತ್ತಿರುವ ಭ್ರಷ್ಟಾಚಾರ ಹಗರಣಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರ ನಾಗಮಂಗಲ ಗಲಭೆಯನ್ನು ಸೃಷ್ಟಿಸಿರುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.
ಶನಿವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೂಡಾ ಹಗರಣ, ಸರ್ಕಾರದ ಹಗರಣಗಳ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿಯೇ ಎಸ್ ಐಟಿ ತನಿಖೆಯ ಆರೋಪ ಪಟ್ಟಿಗಳ ಬಗ್ಗೆ, ವೈಯಕ್ತಿಕ ಚಾಟ್ ಬಗ್ಗೆ ಚರ್ಚೆ ಶುರುವಾಗುತ್ತದೆ. ಇದೆಲ್ಲಾ ಹೇಗೆ ಸಾರ್ವಜನಿಕವಾಗಿ ಬಹಿರಂಗವಾಗಲು ಸಾಧ್ಯ? ತನಿಖಾ ಸಂಸ್ಥೆಗಳೇ ಸೋರಿಕೆ ಮಾಡುತ್ತಿವೆ. ಜನರ ಗಮನವನ್ನು ಬೇರೆಡೆಗೆ ಹೊರಳಿಸಲು ಸರ್ಕಾರ ಇಂಥ ತಂತ್ರಗಾರಿಕೆ ಮಾಡುತ್ತಿದೆ ಎಂದು ದೂರಿದರು.
ನಾಗಮಂಗಲ ಘಟನೆಯಲ್ಲಿ ಅಮಾಯಕರನ್ನು ಬಂಧಿಸಿರುವದು ಸತ್ಯ ಎಂಬ ಸಚಿವ ಚಲುವರಾಯಸ್ವಾಮಿ ಅವರು ಒಪ್ಪಿಕೊಂಡಿದ್ದಾರೆ. ಮೊದಲು ಇದನ್ನು ಗೃಹ ಸಚಿವರು ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದರು. ಎಫ್ಐಆರ್ ನಲ್ಲಿ ಕೋಮು ಗಲಭೆ ಅಂತ ಸೇರಿಸಿದ್ದಾರೆ. ನಮ್ಮನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ. ಮೂರು ಬಾರಿ ಗೃಹಮಂತ್ರಿ ಆಗಿದ್ದವರ ಅನುಭವ ಇದು. ವಿಷಯ ಹೇಳಬೇಕಾದರೇ ಮಾಹಿತಿ ಕ್ರೋಡೀಕರಿಸಿ ಹೇಳಬೇಕು. ಪಾಪ ಅವರು ಬಹಳ ದೊಡ್ಡವರು ಇದ್ದಾರೆ ಎಂದು ಕೇಂದ್ರ ಸಚಿವರು ಛೇಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗ ಅರಿವಾಗಿದೆ. ಅಲ್ಲಿ ಗಲಾಟೆ ಆಗಲಿಕ್ಕೆ ಅವಕಾಶ ಇರಲಿಲ್ಲ. ಇದ್ದಿದ್ದು 150 ಜನ, ನಿಯಂತ್ರಣ ಮಾಡಬಹುದಿತ್ತು. ಇಂತಹ ಪ್ರಕರಣ ನಡೆಯಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇದ್ದಂತಿದೆ. ಕಳೆದ ಮೂರು ತಿಂಗಳಲ್ಲಿ ಹಲವಾರು ವಿಚಾರಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದನ್ನು ನೋಡಿದ್ದೇನೆ. ಆರೋಪ ಪಟ್ಟಿ ಎಸ್ ಐಟಿ ಬಳಿ ಇರುತ್ತದೆ. ಅದು ಹೇಗೆ ಹೊರಗೆ ಸೋರಿಕೆ ಆಗುತ್ತದೆ? ಸರ್ಕಾರ ತಪ್ಪುಗಳನ್ನು ಮುಚ್ಚಿಕೊಳ್ಳಲು ಇಂಥ ಸೋರಿಕೆ ಮಾಡುತ್ತದೆ ಎಂದು ಅವರು ದೂರಿದರು.
ನಾನು ನಾಗಮಂಗಲ ತಾಲ್ಲೂಕು ಅಧ್ಯಕ್ಷನ ಹೆಸರು ಹೇಳಿಲ್ಲ. ಅವರ ಮಗನ ಹೆಸರು ಹೇಳಿಲ್ಲ. ಅಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಇದ್ದರು ಎಂದು ಹೇಳಿದ್ದೇನೆ. ಎಲ್ಲ ಜನಾಂಗ ಶಾಂತಿ ಕಾಪಾಡಿ ಎಂದು ನಾನು ಮನವಿ ಮಾಡಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಮುನಿರತ್ನ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ
ಬಿಜೆಪಿ ಶಾಸಕ ಮುನಿರತ್ನ ಅವರು ಜಾತಿ ನಿಂದನೆ ಮಾಡಿದ್ದಾರೆ ಎನ್ನುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಬೆಳಗ್ಗೆಯಿಂದ ನಾನು ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು, ಸಾರ್ವಜನಿಕರ ಅಹವಾಲು ಆಲಿಸುತ್ತಿದ್ದೇನೆ. ಹೀಗಾಗಿ ನನಗೆ ಏನೂ ಗೊತ್ತಿಲ್ಲ, ಯಾವುದೇ ಮಾಹಿತಿ ಇಲ್ಲ ಇಲ್ಲ ಎಂದರು ಕುಮಾರಸ್ವಾಮಿ ಅವರು.
ಕಾಂಗ್ರೆಸ್ ನವರು ನನ್ನನ್ನು ಯಾಕೆ ಪ್ರಶ್ನೆ ಮಾಡ್ತಾರೆ? ಅವರನ್ನು ನಾನು ಈಗಾಗಲೇ ಸಾವಿರಾರು ಪ್ರಶ್ನೆಗಳನ್ನು ಕೇಳಿದ್ದೇನೆ. ಮೊದಲು ಅವರ ಮುಖ್ಯಮಂತ್ರಿ ದಲಿತರ ನಿವೇಶನ ಹೊಡೆದುಕೊಂಡಿರುವ ಬಗ್ಗೆ ಉತ್ತರ ಕೊಡಲಿ. ಈ ರೀತಿಯ ಘಟನೆ ನಡೆದಿದ್ದರೆ ಕ್ರಮ ತೆಗೆದುಕೊಳ್ಳಬೇಕಿರೋದು ಸರ್ಕಾರ. ನಾನು ಕ್ರಮ ತೆಗೆದುಕೊಳ್ಳೋಕೆ ಆಗುತ್ತಾ? ಎಂದರು ಅವರು.
ನಾನು ಇಂತಹ ವಿಷಯಗಳಿಗೆ, ಅದರಲ್ಲಿಯೂ ಒಂದು ಸಮಾಜ ಬಗ್ಗೆ ಅವಹೇಳನ ಮಾಡೋದಕ್ಕೆ, ಹಿಂಸೆ ನೀಡೋಕೆ, ಭ್ರಷ್ಟ ವ್ಯವಸ್ಥೆಗೆ ಬೆಂಬಲ ಕೊಟ್ಟಿಲ್ಲ. ಸರ್ಕಾರ ಅವರ ಜವಾಬ್ದಾರಿ ನಿರ್ವಹಣೆ ಮಾಡಿಕೊಳ್ಳಬೇಕು ಎಂದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…