ರಾಜ್ಯ

ಮಕ್ಕಳಲ್ಲಿ ಸೃಜನಶೀಲತೆ ಅರಳಬೇಕು : ಕೆ.ವಿ.ಪ್ರಭಾಕರ್

ಬೆಂಗಳೂರು : ಮಕ್ಕಳಲ್ಲಿ ಕುತೂಹಲ ಕೆರಳಿಸುವುದು, ಮಕ್ಕಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮತ್ತು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಅವರೊಳಗಿನ ಸೃಜನಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಆಯೋಜಿಸಿದ್ದ ಚಿಣ್ಣರ ಜಾಗೃತಿ-ಪ್ರಶಸ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಪ್ರತಿ ಮಗುವೂ ಹುಟ್ಟುತ್ತಲೇ ಪ್ರತಿಭೆಗಳ ಕಣಜ ಆಗಿರುತ್ತದೆ. ಆ ಮಗುವಿನ ಮನಸ್ಸಿನ, ಆಲೋಚನೆಯ ಕಿಟಕಿ ತೆರೆದಾಗ ಪ್ರತಿಭೆ ಹೊರಗೆ ಬರುತ್ತದೆ. ಆದ್ದರಿಂದ ಮಕ್ಕಳನ್ನು ಯಾರೂ ಪ್ರತಿಭಾವಂತರನ್ನಾಗಿ ಮಾಡುವ ಅಗತ್ಯವಿಲ್ಲ. ಪ್ರತಿಭೆ ಅರಳಲು ಅಗತ್ಯವಾದ ವಾತಾವರಣ ಕಲ್ಪಿಸಿದರೆ ಸಾಕು ಎಂದರು.

ಮಕ್ಕಳ ಬೆನ್ನು ತಟ್ಟುವುದು, ಪ್ರತಿಭೆ ಗುರುತಿಸುವುದು ಎಂದರೆ, ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ.

ಇಂದು ಪುರಸ್ಕಾರಗೊಂಡ ಮಕ್ಕಳಿಗೆ ನಾನೊಂದು ಕಿವಿಮಾತು ಹೇಳಲು ಬಯಸುತ್ತೇನೆ.‌ ನೀವುಗಳು ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆಯನ್ನು ಯಾವತ್ತೂ ಕಳೆದುಕೊಳ್ಳಬಾರದು. ಇಲ್ಲದಿದ್ದರೆ ನಿಮ್ಮೊಳಗಿನ ಪ್ರತಿಭೆ ಬಾಡುತ್ತದೆ. ಮೊಬೈಲ್, ಟ್ಯಾಬ್ ಗಳ ಗೀಳು ನಿಮ್ಮೊಳಗಿನ ಸೃಜನಶೀಲತೆಯನ್ನು ಕೊಂದು ಪ್ರತಿಭಾಶೂನ್ಯರನ್ನಾಗಿಸುತ್ತದೆ. ವೀಡಿಯೊ ಗೇಮ್ ಗಳು ಕೇವಲ kill, target, fight ಅನ್ನುವ ಆಕ್ರಮಣಕಾರಿ ವರ್ತನೆಯನ್ನೇ ಬೆಳೆಸುತ್ತವೆ. ಹೀಗಾಗಿ ಮೊಬೈಲ್ ಬಿಡಿ-ಪುಸ್ತಕ ಹಿಡಿ-ಮೈದಾನದ ಕಡೆ ನಡಿ ಎನ್ನುವುದನ್ನು ಮಕ್ಕಳು ಪಾಲಿಸುತ್ತಾ, ಕಲಿಕೆಯ ಕುತೂಹಲ, ಅಧ್ಯಯನಶೀಲತೆಯನ್ನು ಬದುಕಿನ ಕೊನೆ ಕ್ಷಣದವರೆಗೂ ಪಾಲಿಸಿ ಎಂದು ಕರೆ ನೀಡಿದರು.

ಮಕ್ಕಳ ದೃಷ್ಟಿಕೋನದಲ್ಲಿ ಭವಿಷ್ಯದ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದ ಜವಾಹರಲಾಲ್ ನೆಹರೂ ಅವರ ಗುರಿಯ ಭಾಗವಾಗಿಯೇ ಬಾಲಭವನ ಸ್ಥಾಪನೆಯಾಗಿದೆ. ಅದಕ್ಕೇ “ಜವಾಹರ ಬಾಲ ಭವನ” ಅಂತಲೇ ಹೆಸರಿಡಲಾಗಿದೆ ಎಂದರು.

ಇದನ್ನು ಓದಿ: ದ್ವಿದಳ ಧಾನ್ಯ ಬೆಳೆಯಲು 35 ಸಾವಿರ ಕೋಟಿ ಕೇಂದ್ರ ಅನುದಾನ : ಎಚ್‌ಡಿಕೆ

ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಅದಕ್ಕೇ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿರು.

ಕತೆಗಳನ್ನು ಕೇಳುವ ಮೂಲಕ ಮಕ್ಕಳ ಕಲ್ಪನಾ ಜಗತ್ತು ವಿಪರೀತ ವಿಕಾಸಗೊಳ್ಳುತ್ತಿತ್ತು.
ಇದನ್ನು ಜವಾಹರಲಾಲ್ ನೆಹರೂ ಅವರು ಮನಗಂಡಿದ್ದರು. ಮಕ್ಕಳ ದೃಷ್ಟಿಕೋನದಲ್ಲಿ ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ನೀಲನಕ್ಷೆ ನೆಹರೂ ಅವರು ಸಿದ್ದಪಡಿಸಿದ್ದರು ಎಂದು ಸ್ಮರಿಸಿದರು.

ನೆಹರೂ ಅವರು, “ಮಕ್ಕಳು ತೋಟದಲ್ಲಿರುವ ಮೊಗ್ಗುಗಳಂತೆ, ಈ ಮೊಗ್ಗುಗಳನ್ನು ಎಚ್ಚರಿಕೆಯಿಂದ ಪ್ರೀತಿಯಿಂದ ಪೋಷಿಸಬೇಕು, ಆಗಷ್ಟೆ ಜವಾಬ್ದಾರಿಯುತ ನಾಗರಿಕರು ರೂಪುಗೊಳ್ಳುತ್ತಾರೆ” ಎನ್ನುವ ಸ್ಪಷ್ಟವಾದ ವೈಜ್ಞಾನಿಕ ತಿಳಿವಳಿಕೆ ಮತ್ತು ದೂರ ದೃಷ್ಟಿ ಹೊಂದಿದ್ದರು.

ಈ ದೂರದೃಷ್ಟಿಯಿಂದ ಬಾಲಭವನ‌ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಬಾಲ ಭವನದ ಜೊತೆಗೆ ಪ್ರೆಸ್ ಕ್ಲಬ್ ಕೂಡ ಕೈ ಜೋಡಿಸಿ ಪತ್ರಕರ್ತರ ಮಕ್ಕಳಿಗೆ ಅವರೊಳಗಿನ ಕ್ರಿಯಾಶೀಲತೆ ಅರಳಲು, ಮನೋಲೋಕ ವಿಸ್ತಾರಗೊಳ್ಳಲು ಮುಂದಾಗಿರುವುದು ಆರೋಗ್ಯಕಾರಿ ಬೆಳವಣಿಗೆ ಎಂದು ಶ್ಲಾಘಿಸಿದರು.

ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್, ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ , ಬಾಲ ಭವನ‌ ಅಧ್ಯಕ್ಷರಾದ ಬಿ.ಆರ್.ನಾಯ್ಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹೇಶ್, ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿ ನಟರಾಜ್, ಜನಪದ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಗಾಯಕ ಅಕ್ಬರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

4 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

10 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

10 hours ago