ರಾಜ್ಯ

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಡಿಸೆಂಬರ್ ೨೪ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ ೩ ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಇದನ್ನೂ ಓದಿ:-5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಆರ್‌ಸಿಬಿ ಐಪಿಎಲ್ ಕಪ್ ಗೆದ್ದ ಸಂದರ್ಭದಲ್ಲಿ ವಿಜಯೋತ್ಸವ ಆಚರಿಸುವಾಗ ಜೂನ್ ೪ರಂದು ಬೆಂಗಳೂರಿನಲ್ಲಿ ಕಾಲ್ತುಳಿತವಾಗಿ ಹಲವರ ಜೀವ ಹಾನಿಯಾಗಿತ್ತು. ಅದರ ನಂತರ ಐಪಿಎಲ್ ಪಂದ್ಯಾವಳಿಗಳನ್ನು ಬೆಂಗಳೂರಿನಲ್ಲಿ ನಡೆಸಲು ಅನುಮತಿ ನಿರಾಕರಿಸಲಾಗಿತ್ತು. ಇದೇ ೨೪ ರಿಂದ ವಿಜಯ್ ಹಜಾರೆ ಟ್ರೊಫಿ ಪಂದ್ಯಾವಳಿಗಳು ನಡೆಯಲಿದೆ.. ಆ ಆಟದ ಪಂದ್ಯಗಳನ್ನು ಪ್ರೆ?ಕ್ಷಕರ ರಹಿತವಾಗಿ ಬೆಂಗಳೂರಿನಲ್ಲೂ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಮನವಿ ಮಾಡಿದೆ.

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

4 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

4 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

5 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

5 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

5 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

5 hours ago