ರಾಜ್ಯ

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಡಿಸೆಂಬರ್ ೨೪ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ ೩ ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಇದನ್ನೂ ಓದಿ:-5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಆರ್‌ಸಿಬಿ ಐಪಿಎಲ್ ಕಪ್ ಗೆದ್ದ ಸಂದರ್ಭದಲ್ಲಿ ವಿಜಯೋತ್ಸವ ಆಚರಿಸುವಾಗ ಜೂನ್ ೪ರಂದು ಬೆಂಗಳೂರಿನಲ್ಲಿ ಕಾಲ್ತುಳಿತವಾಗಿ ಹಲವರ ಜೀವ ಹಾನಿಯಾಗಿತ್ತು. ಅದರ ನಂತರ ಐಪಿಎಲ್ ಪಂದ್ಯಾವಳಿಗಳನ್ನು ಬೆಂಗಳೂರಿನಲ್ಲಿ ನಡೆಸಲು ಅನುಮತಿ ನಿರಾಕರಿಸಲಾಗಿತ್ತು. ಇದೇ ೨೪ ರಿಂದ ವಿಜಯ್ ಹಜಾರೆ ಟ್ರೊಫಿ ಪಂದ್ಯಾವಳಿಗಳು ನಡೆಯಲಿದೆ.. ಆ ಆಟದ ಪಂದ್ಯಗಳನ್ನು ಪ್ರೆ?ಕ್ಷಕರ ರಹಿತವಾಗಿ ಬೆಂಗಳೂರಿನಲ್ಲೂ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಮನವಿ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

4 mins ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

10 mins ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

1 hour ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

2 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

2 hours ago

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…

2 hours ago