ರಾಜ್ಯ

ರಶ್ಮಿಕಾ ವಿರುದ್ಧ ಟೀಕೆ ; ಶಾಸಕ ರವಿ ಗಣಿಗ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಕನ್ನಡದ ಕೊಡಗಿನ ಮೂಲದವರಾದ ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಮಂಡ್ಯ ಶಾಸಕ ಪಿ.ರವಿಕುಮಾರ್‌ ಗಣಿಗ ಅವರು ಕುಹುಕವಾಡಿದ್ದರು.

ಸದ್ಯ ಈ ವಿಚಾರದಲ್ಲಿ ರಶ್ಮಿಕ ಪರ ನಿಂತಿರುವ ಕೊಡವ ನ್ಯಾಷನಲ್‌ ಸಂಘಟನೆ ಕಳೆದ ವಾರವಷ್ಟೆ ಕೇಂದ್ರ ಹಾಗೂ ರಾಜ್ಯ ಗೃಹ ಸಚಿವಾಲಯಕ್ಕೆ ಶಾಸಕರ ವಿರುದ್ಧ ದೂರು ದಾಖಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಶಾಸಕ ರವಿಕುಮಾರ್‌ ರಶ್ಮಿಕಾ ಮಂದಣ್ಣ ವಿಚಾರದಲ್ಲಿ ತಲೆಹಾಕಿರುವ ಕೊಡವ ನ್ಯಾಷನಲ್‌ ಸಂಘಟನೆ ಅಧ್ಯಕ್ಯ ನಾಚಪ್ಪ ಪ್ರಚಾರ ಪಡ್ಕೊತ್ತಿದ್ದಾರೆ ಎಂದು ಟೀಕಿಸಿದ್ದರು.

ಇದೀಗ, ಅಧ್ಯಕ್ಷ ನಾಚಪ್ಪ ಶಾಸಕ ರವಿಕುಮಾರ್‌ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಶಾಸಕ ರವಿಕುಮಾರ್‌ ವಿರುದ್ದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅತಿ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗದಿಂದ ಬಂದವರು. ಇದೀಗ ತನ್ನ ಪರಿಶ್ರಮದಿಂದ ಅವರು ಬಹುಭಾಷ ನಟಿಯಾಗಿದ್ದಾರೆ. ಆದರೆ, ಶಾಸಕ ರವಿಕುಮಾರ್‌ ಅವರು ರಶ್ಮಿಕಾ ಅವರು ಹೆಸರು ಪ್ರಸ್ತಾಪಿಸಿ ಅನಗತ್ಯ ವಿವಾದ ಸೃಷ್ಟಿ ಮಾಡ್ತಿದ್ದಾರೆ. ಅಲ್ಲದೇ ಅವರನ್ನು ಬೆದರಿಸುವ ಮೂಲಕ ಸಂವಿಧಾನ ವಿರೋಧಿ ಚಟುವಟಿಕೆ ಮಾಡ್ತಿದ್ದಾರೆ. ಹೀಗಾಗಿ ಶಾಸಕರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

ಅಷ್ಟೆ ಅಲ್ಲದೇ, ಮಹಿಳಾ ಆಯೋಗದ ಮಾಜಿ ಸದಸ್ಯೆ ಖುಷ್ಬೂ ಅವರಿಗೂ ಈ ಕುರಿತು ಸಂದೇಶ ರವಾನಿಸಿದ್ದಾರೆ. ಸದ್ಯ ಈ ವಿಚಾರವನ್ನು ಆಯೋಗ ಕೈಗೆತ್ತಿಕೊಂಡರೆ ಶಾಸಕ ರವಿಕುಮಾರ್‌ ಅವರಿಂದ ಸ್ಪಷ್ಟನೆ ಕೇಳಬಹುದು ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

2 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

2 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

2 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

3 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

3 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

4 hours ago