ಬೆಂಗಳೂರು: ಕನ್ನಡದ ಕೊಡಗಿನ ಮೂಲದವರಾದ ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಮಂಡ್ಯ ಶಾಸಕ ಪಿ.ರವಿಕುಮಾರ್ ಗಣಿಗ ಅವರು ಕುಹುಕವಾಡಿದ್ದರು.
ಸದ್ಯ ಈ ವಿಚಾರದಲ್ಲಿ ರಶ್ಮಿಕ ಪರ ನಿಂತಿರುವ ಕೊಡವ ನ್ಯಾಷನಲ್ ಸಂಘಟನೆ ಕಳೆದ ವಾರವಷ್ಟೆ ಕೇಂದ್ರ ಹಾಗೂ ರಾಜ್ಯ ಗೃಹ ಸಚಿವಾಲಯಕ್ಕೆ ಶಾಸಕರ ವಿರುದ್ಧ ದೂರು ದಾಖಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಶಾಸಕ ರವಿಕುಮಾರ್ ರಶ್ಮಿಕಾ ಮಂದಣ್ಣ ವಿಚಾರದಲ್ಲಿ ತಲೆಹಾಕಿರುವ ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಯ ನಾಚಪ್ಪ ಪ್ರಚಾರ ಪಡ್ಕೊತ್ತಿದ್ದಾರೆ ಎಂದು ಟೀಕಿಸಿದ್ದರು.
ಇದೀಗ, ಅಧ್ಯಕ್ಷ ನಾಚಪ್ಪ ಶಾಸಕ ರವಿಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಶಾಸಕ ರವಿಕುಮಾರ್ ವಿರುದ್ದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ರಶ್ಮಿಕಾ ಮಂದಣ್ಣ ಅತಿ ಸೂಕ್ಷ್ಮ ಕೊಡವ ಬುಡಕಟ್ಟು ಜನಾಂಗದಿಂದ ಬಂದವರು. ಇದೀಗ ತನ್ನ ಪರಿಶ್ರಮದಿಂದ ಅವರು ಬಹುಭಾಷ ನಟಿಯಾಗಿದ್ದಾರೆ. ಆದರೆ, ಶಾಸಕ ರವಿಕುಮಾರ್ ಅವರು ರಶ್ಮಿಕಾ ಅವರು ಹೆಸರು ಪ್ರಸ್ತಾಪಿಸಿ ಅನಗತ್ಯ ವಿವಾದ ಸೃಷ್ಟಿ ಮಾಡ್ತಿದ್ದಾರೆ. ಅಲ್ಲದೇ ಅವರನ್ನು ಬೆದರಿಸುವ ಮೂಲಕ ಸಂವಿಧಾನ ವಿರೋಧಿ ಚಟುವಟಿಕೆ ಮಾಡ್ತಿದ್ದಾರೆ. ಹೀಗಾಗಿ ಶಾಸಕರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.
ಅಷ್ಟೆ ಅಲ್ಲದೇ, ಮಹಿಳಾ ಆಯೋಗದ ಮಾಜಿ ಸದಸ್ಯೆ ಖುಷ್ಬೂ ಅವರಿಗೂ ಈ ಕುರಿತು ಸಂದೇಶ ರವಾನಿಸಿದ್ದಾರೆ. ಸದ್ಯ ಈ ವಿಚಾರವನ್ನು ಆಯೋಗ ಕೈಗೆತ್ತಿಕೊಂಡರೆ ಶಾಸಕ ರವಿಕುಮಾರ್ ಅವರಿಂದ ಸ್ಪಷ್ಟನೆ ಕೇಳಬಹುದು ಎನ್ನಲಾಗಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…