ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸವಾಲು ಹಾಕಿದ್ದಾರೆ.
ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಮೆ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಟಾ ಬಯಲಾಗಲಿದೆ ಎಂದರು.
ಇದನ್ನು ಓದಿ: ದಿಲ್ಲಿಯಲ್ಲಿ ಮೆಸ್ಸಿ : ಮೋದಿ ಭೇಟಿ ನಿರೀಕ್ಷೆ, ಹ್ಯಾಂಡ್ಶೇಕ್ಗೆ 1 ಕೋಟಿ ರೂ.!
ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ಈಶ್ವರ ಖಂಡ್ರೆ ಪುನರುಚ್ಚರಿಸಿದರು.
ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೇ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೇ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಅವರಿಗೆ ಸತ್ಯದ ಅರಿವಿದೆ ಎಂದರು.
ಬಾಗೆ ಮಾಡಲು ಕೆಲಸವಿಲ್ಲ; ಈಗ ನಿರುದ್ಯೋಗಿಯಾಗಿದ್ದಾರೆ ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾ, ಕಾಲ ತಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…