ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸವಾಲು ಹಾಕಿದ್ದಾರೆ.
ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಮೆ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಟಾ ಬಯಲಾಗಲಿದೆ ಎಂದರು.
ಇದನ್ನು ಓದಿ: ದಿಲ್ಲಿಯಲ್ಲಿ ಮೆಸ್ಸಿ : ಮೋದಿ ಭೇಟಿ ನಿರೀಕ್ಷೆ, ಹ್ಯಾಂಡ್ಶೇಕ್ಗೆ 1 ಕೋಟಿ ರೂ.!
ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ಈಶ್ವರ ಖಂಡ್ರೆ ಪುನರುಚ್ಚರಿಸಿದರು.
ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೇ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೇ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಅವರಿಗೆ ಸತ್ಯದ ಅರಿವಿದೆ ಎಂದರು.
ಬಾಗೆ ಮಾಡಲು ಕೆಲಸವಿಲ್ಲ; ಈಗ ನಿರುದ್ಯೋಗಿಯಾಗಿದ್ದಾರೆ ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾ, ಕಾಲ ತಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…