ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸವಾಲು ಹಾಕಿದ್ದಾರೆ.
ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಮೆ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಟಾ ಬಯಲಾಗಲಿದೆ ಎಂದರು.
ಇದನ್ನು ಓದಿ: ದಿಲ್ಲಿಯಲ್ಲಿ ಮೆಸ್ಸಿ : ಮೋದಿ ಭೇಟಿ ನಿರೀಕ್ಷೆ, ಹ್ಯಾಂಡ್ಶೇಕ್ಗೆ 1 ಕೋಟಿ ರೂ.!
ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ಈಶ್ವರ ಖಂಡ್ರೆ ಪುನರುಚ್ಚರಿಸಿದರು.
ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೇ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೇ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಅವರಿಗೆ ಸತ್ಯದ ಅರಿವಿದೆ ಎಂದರು.
ಬಾಗೆ ಮಾಡಲು ಕೆಲಸವಿಲ್ಲ; ಈಗ ನಿರುದ್ಯೋಗಿಯಾಗಿದ್ದಾರೆ ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾ, ಕಾಲ ತಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…