ರಾಜ್ಯ

ಬೆಳೆ ವಿಮೆ ಪರಿಹಾರ ಸುಧಾರಣೆ : ಅದೇ ಹಂಗಾಮಿನಲ್ಲೇ ವಿತರಣೆಗೆ ಕ್ರಮ ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ವಿಧಾನಸಭೆಯಲ್ಲಿ ಉತ್ತರ ನೀಡಿದರು.

ಕಲ್ಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಬಿತ್ತನೆ ಮಾಡಿದ ಕೆಲವೇ ದಿನಗಳಲ್ಲಿ ಅಧಿಕ ಮಳೆಯಿಂದ ಶೇ 5೦ಕ್ಕೂ ಹೆಚ್ಚು ಬೆಳೆ ಹಾನಿ ಆದ ಸಂದರ್ಭದಲ್ಲಿ ತಕ್ಷಣವೇ ರೈತರಿಗೆ ಮಿಡ್ ಸೀಸನ್ ಅಡ್ವೈಸರಿ ನಿಯಾಮಾವಳಿ ಪ್ರಕಾರ ವಿಮೆ ಪರಿಹಾರವನ್ನು ನೀಡಿ ರೈತರ ನೇರವಿಗೆ ನಮ್ಮ ಸರ್ಕಾರ ಧಾವಿಸಿದೇ ಎಂದು ಸಚಿವರು ಉತ್ತರಿಸಿದರು.

ವಿಶೇಷವಾಗಿ ಕಪ್ & ಕ್ಯಾಪ್ ಮಾದರಿಯಲ್ಲಿ ವಿಮೆ ಪರಿಹಾರವನ್ನು ನಿರ್ಧರಿಸಲು ಕ್ರಮ ಕೈಕೊಂಡಿರುವುದರಿಂದ ವಿಮೆ ಪರಿಹಾರ ವಿತರಣೆಯಲ್ಲಿ ಸುಧಾರಣೆಯನ್ನು ತರಲಾಗಿದೆ.

ಈ ಕುರಿತು ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿರುವುದಲ್ಲದೇ, ಕ್ರಾಪ್ ಕಟಿಂಗ್ ಎಕ್ಸಪರಿಮೇಟ್ ಸರಿಯಾಗಿ ಹಾಗೂ ವೈಜ್ಞಾನಿಕವಾಗಿ ನಡೆಸಬೇಕೆಂದು ಸೂಚನೆ ನೀಡಲಾಗಿದ್ದರ ಪರಿಣಾಮ ರಾಜ್ಯದಲ್ಲಿ ಬೆಳೆ ವಿಮೆ ಯೋಜನೆಯನ್ನು ಅತ್ಯಂತ ಯಶ್ವಸಿಯಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಈ ಮೂರು ವರ್ಷಗಳಲ್ಲಿ ಎಲ್ಲಾ ಹಂಗಾಮುಗಳಲ್ಲಿ ರಾಜ್ಯದಲ್ಲಿ ಒಟ್ಟು 73 ಲಕ್ಷ ರೈತರು ವಿಮೆ ಹಣ ಪಾವತಿಸಿ ನೊಂದಾಯಿಸಿಕೊಂಡವರ ಪೈಕಿ ಶೇ ಅಂದಾಜು 60% ರಷ್ಟು ರೈತರು, 43 ಲಕ್ಷ ನೊಂದಾಯಿಸಿಕೊಂಡ ರೈತರಿಗೆ ಒಟ್ಟು 5542.17 ಕೋಟಿ ರೂಪಾಯಿಗಳ ವಿಮೆ ಪರಹಾರವನ್ನು ನೀಡಿ ರೈತರ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರ ರೈತರಿಗೆ ವಿಮೆ ನೀಡಿ ರೈತರ ಸಂಕಷ್ಟಕ್ಕೆ ನೆರವಾಗಿದೆ ಎಂದು ಚಲುವರಾಯಸ್ವಾಮಿಯವರು ತಿಳಿಸಿದರು.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಒಟ್ಟು 21 ಲಕ್ಷ ರೈತರು ನೋಂದಣಿಯಾಗಿದ್ದು, ಬಿತ್ತನೆ ವೈಫಲ್ಯ, ಪ್ರಕೃತಿ ವಿಕೋಪ, ಮಧ್ಯಂತರ ಬೆಳೆ ವಿಮೆ ಪರಿಹಾರ, ಕೋಯ್ಲೋತ್ತರ ಬೆಳೆ ನಷ್ಟದಡಿ 7.06 ಲಕ್ಷ ರೈತರಿಗೆ ಒಟ್ಟು ರೂ. 571.49 ಕೋಟಿ ಪರಿಹಾರ ಮಂಜೂರಾಗಿದ್ದು, ಇಲ್ಲಿಯವರೆಗೆ 3.41 ಲಕ್ಷ ರೈತರಿಗೆ ರೂ.218.80 ಕೋಟಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವರು ಉತ್ತರಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಡಿ ಒಟ್ಟು 20563 ಪ್ರಕರಣಗಳಿಗೆ ಒಟ್ಟು ರೂ. 8.21 ಕೋಟಿ ಬೆಳೆ ವಿಮೆ ಪರಿಹಾರ ಇತ್ಯರ್ಥಪಡಿಸಲಾಗಿದೆ. ಮಧ್ಯಂತರ ಬೆಳೆ ವಿಮೆ ಪರಿಹಾರದಡಿ ( mid season Adversity) ಒಟ್ಟು 2.67 ಲಕ್ಷ ರೈತರಿಗೆ 234.74 ಕೋಟಿ ವಿಮೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago