ರಾಜ್ಯ

ಸಿ.ಟಿ.ರವಿ ಬಂಧನ ಪ್ರಕರಣ| ಸಭಾಪತಿ ತೀರ್ಪೇ ಅಂತಿಮ: ಬಸವರಾಜ ಹೊರಟ್ಟಿ

ಬೆಂಗಳೂರು: ಸಿ.ಟಿ.ರವಿ ಬಂಧನ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿಗೆ ವಹಿಸಲಾಗಿದೆ. ಸದನದ ಆವರಣದೊಳಗೆ ಶಿಸ್ತು ಕಾಪಾಡುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಅಧಿಕಾರ ಸಭಾಪತಿಗೆ ಇರುತ್ತದೆ. ಹೀಗಾಗಿ ಸಭಾಪತಿ ತೀರ್ಪೇ ಅಂತಿಮ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ.ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ.

ಸರ್ಕಾರ, ಕಳೆದ ತಿಂಗಳು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಈ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಆದರೆ ಇದೀಗ ಸರ್ಕಾರದ ನಡೆಗೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಸಭಾಪತಿ ಪ್ರತದಲ್ಲಿ ಏನಿದೆ?

ಸಿ.ಟಿ.ರವಿ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಸದನದಲ್ಲಿ ಯಾವುದೇ ಘಟನೆ ನಡೆದರೂ, ಆ ಘಟನೆಯ ಬಗ್ಗೆ ಚರ್ಚಿಸುವುದು ಹಾಗೂ ಅಂತಿಮಗೊಳಿಸುವ ಕುರಿತು ನಿರ್ಧರಿಸುವ ಸಾರ್ವಭೌಮತ್ವ ಅಧಿಕಾರ ಸದಸಕ್ಕೆ ಇರುತ್ತದೆ. ಅಲ್ಲದೇ ಡಿಸೆಂಬರ್‌.19ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪರಾಮರ್ಶಿಸಿಕೊಂಡು ಪೀಠದ ತೀರ್ಪು ನೀಡಲಾಗಿದೆ. ಹೀಗಿದ್ದರೂ ಶಾಸಕಾಂಗಕ್ಕೆ ಮತ್ತು ಸಭಾಪತಿಯವರಿಗೆ ಪ್ರದತ್ತವಾದ ವಿಶೇಷ ಅಧಿಕಾರಕ್ಕೆ ಚ್ಯುತಿ ಬರುವಂತೆ ಕಾರ್ಯಾಂಗವು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮೂಲಕ ಸಾಂವಿಧಾನಿಕ ಸಂಘರ್ಷಣೆಗೆ ಅವಕಾಶ ಮಾಡಿಕೊಡುತ್ತಿದೆ. ವಿನಾಕಾರಣ ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಸಂಘರ್ಷದ ಪ್ರಮೇಯ ನಿರ್ಮಾಣವಾಗಬಾರದು ಎಂದು ಉಲ್ಲೇಖಿಸಿದ್ದಾರೆ.

ನನಗೆ ಇನ್ನೂ ಪತ್ರ ತಲುಪಿಲ್ಲ: ಜಿ. ಪರಮೇಶ್ವರ್‌

ಸಭಾಪತಿ ಬಸವರಾಜ ಹೊರಟ್ಟಿ ಅವರು ಬರೆದ ಪತ್ರ ನನಗೆ ಇನ್ನೂ ತಲುಪಿಲ್ಲ. ಕಚೇರಿಗೆ ತಲುಪಿದೆಯಾ ಅಥವಾ ಇಲ್ಲವಾ ಎಂಬುದನ್ನು ಪರಿಶೀಲಿಸುತ್ತೇನೆ. ಕಾನೂನು ಸಲಹೆಗಾರರ ಸಲಹೆ ಪಡೆದು ತೀರ್ಮಾನಿಸುತ್ತೇನೆ. ಕಾನೂನು ಎಲ್ಲರಿಗೂ ಒಂದೇ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಸಚಿವೆ ಲಕ್ಷ್ಮೀ ದೂರಿನ ಆಧಾರದ ಮೇರೆಗೆ ಸಿಐಡಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಜೊತೆಗೆ ಈ ಘಟನೆಯಿಂದ ಅನಾವಶ್ಯಕ ಗೊಂದಲ ಆಗಬಾರದೆಂಬ ಕಾರಣಕ್ಕೆ ಸಿಐಡಿ ತನಿಖೆಗೆ ನೀಡಿದ್ದೇವೆ. ಸಭಾಪತಿ ಹಾಗೂ ಸರ್ಕಾರದ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

6 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

7 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

7 hours ago