ರಾಜ್ಯ

ಸಿ.ಟಿ.ರವಿ ಬಂಧನ ಪ್ರಕರಣ| ಸಭಾಪತಿ ತೀರ್ಪೇ ಅಂತಿಮ: ಬಸವರಾಜ ಹೊರಟ್ಟಿ

ಬೆಂಗಳೂರು: ಸಿ.ಟಿ.ರವಿ ಬಂಧನ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿಗೆ ವಹಿಸಲಾಗಿದೆ. ಸದನದ ಆವರಣದೊಳಗೆ ಶಿಸ್ತು ಕಾಪಾಡುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಅಧಿಕಾರ ಸಭಾಪತಿಗೆ ಇರುತ್ತದೆ. ಹೀಗಾಗಿ ಸಭಾಪತಿ ತೀರ್ಪೇ ಅಂತಿಮ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ.ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ.

ಸರ್ಕಾರ, ಕಳೆದ ತಿಂಗಳು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಈ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಆದರೆ ಇದೀಗ ಸರ್ಕಾರದ ನಡೆಗೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಸಭಾಪತಿ ಪ್ರತದಲ್ಲಿ ಏನಿದೆ?

ಸಿ.ಟಿ.ರವಿ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಸದನದಲ್ಲಿ ಯಾವುದೇ ಘಟನೆ ನಡೆದರೂ, ಆ ಘಟನೆಯ ಬಗ್ಗೆ ಚರ್ಚಿಸುವುದು ಹಾಗೂ ಅಂತಿಮಗೊಳಿಸುವ ಕುರಿತು ನಿರ್ಧರಿಸುವ ಸಾರ್ವಭೌಮತ್ವ ಅಧಿಕಾರ ಸದಸಕ್ಕೆ ಇರುತ್ತದೆ. ಅಲ್ಲದೇ ಡಿಸೆಂಬರ್‌.19ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪರಾಮರ್ಶಿಸಿಕೊಂಡು ಪೀಠದ ತೀರ್ಪು ನೀಡಲಾಗಿದೆ. ಹೀಗಿದ್ದರೂ ಶಾಸಕಾಂಗಕ್ಕೆ ಮತ್ತು ಸಭಾಪತಿಯವರಿಗೆ ಪ್ರದತ್ತವಾದ ವಿಶೇಷ ಅಧಿಕಾರಕ್ಕೆ ಚ್ಯುತಿ ಬರುವಂತೆ ಕಾರ್ಯಾಂಗವು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮೂಲಕ ಸಾಂವಿಧಾನಿಕ ಸಂಘರ್ಷಣೆಗೆ ಅವಕಾಶ ಮಾಡಿಕೊಡುತ್ತಿದೆ. ವಿನಾಕಾರಣ ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಸಂಘರ್ಷದ ಪ್ರಮೇಯ ನಿರ್ಮಾಣವಾಗಬಾರದು ಎಂದು ಉಲ್ಲೇಖಿಸಿದ್ದಾರೆ.

ನನಗೆ ಇನ್ನೂ ಪತ್ರ ತಲುಪಿಲ್ಲ: ಜಿ. ಪರಮೇಶ್ವರ್‌

ಸಭಾಪತಿ ಬಸವರಾಜ ಹೊರಟ್ಟಿ ಅವರು ಬರೆದ ಪತ್ರ ನನಗೆ ಇನ್ನೂ ತಲುಪಿಲ್ಲ. ಕಚೇರಿಗೆ ತಲುಪಿದೆಯಾ ಅಥವಾ ಇಲ್ಲವಾ ಎಂಬುದನ್ನು ಪರಿಶೀಲಿಸುತ್ತೇನೆ. ಕಾನೂನು ಸಲಹೆಗಾರರ ಸಲಹೆ ಪಡೆದು ತೀರ್ಮಾನಿಸುತ್ತೇನೆ. ಕಾನೂನು ಎಲ್ಲರಿಗೂ ಒಂದೇ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಸಚಿವೆ ಲಕ್ಷ್ಮೀ ದೂರಿನ ಆಧಾರದ ಮೇರೆಗೆ ಸಿಐಡಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಜೊತೆಗೆ ಈ ಘಟನೆಯಿಂದ ಅನಾವಶ್ಯಕ ಗೊಂದಲ ಆಗಬಾರದೆಂಬ ಕಾರಣಕ್ಕೆ ಸಿಐಡಿ ತನಿಖೆಗೆ ನೀಡಿದ್ದೇವೆ. ಸಭಾಪತಿ ಹಾಗೂ ಸರ್ಕಾರದ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

8 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

11 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

12 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

13 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

13 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

13 hours ago