ರಾಜ್ಯ

ಸಿಟಿ ರವಿ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಯತ್ನಾಳ್‌ ಆಗ್ರಹ

ವಿಜಯಪುರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಎಂ.ಎಲ್‌.ಸಿ ಸಿಟಿ ರವಿ ಸದನದಲ್ಲಿ ಅಶ್ಲೀಲ ಪದ ಬಳಕೆಗೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣ ಸಂಬಂಧ ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

ಇಂದು (ಡಿ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಐಡಿಯು ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತದೆ. ಏಕೆಂದರೆ ಅದರ ಮೇಲೆ ಒತ್ತಡಿವಿದೆ. ಆದ ಕಾರಣ ನಮಗೆ ಅದರ ಮೇಲೆ ವಿಶ್ವಾಸವಿಲ್ಲ ಅಂದು ಆರೋಪಿಸಿದರು.

ಸಿಟಿ ರವಿ ಅವರ ಮೇಲೆ ಎನ್‌ಕೌಟರ್‌ ಪ್ಲ್ಯಾನ್‌ ಕೂಡ ಮಾಡಲಾಗಿತ್ತು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಕಾಂಗ್ರೆಸ್‌ ಶತಮಾನೋತ್ಸವಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯತ್ನಾಳ್‌, ಇದು ನಕಲಿಯರು ಸೇರಿಕೊಂಡು ಮಾಡುತ್ತಿರುವ ಕಾಂಗ್ರೆಸ್‌ ಅಧಿವೇಶನ. ಗಾಂಧಿ ಹೆಸರು ಇಟ್ಟುಕೊಂಡು ಅಧಿವೇಶನ ಮಾಡುವ ಕಾರಣಕ್ಕೆ ಕಾರ್ಯಕ್ರಮಕ್ಕೆ ಪಾವಿತ್ರ್ಯತೆ ಬರುವುದಿಲ್ಲ. ಕಾಂಗ್ರೆಸ್‌ನವರು ಗಾಂಧೀಜಿಯವರನ್ನು ಮಾತ್ರ ಸ್ಮರಣೆ ಮಾಡುತ್ತಾರೆ. ಆದರೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸ್ಮರಣೆ ಮಾಡುವುದಿಲ್ಲ ಎಂದರು.

ಸನಾತನ ಧರ್ಮ ಉಳಿದರೆ ಮಾತ್ರ ಭಾರತದ ಸಂವಿಧಾನ ಉಳಿಯುವುದು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

6 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

9 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

9 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

9 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

10 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

10 hours ago