ರಾಜ್ಯ

ಸಿಟಿ ರವಿ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಯತ್ನಾಳ್‌ ಆಗ್ರಹ

ವಿಜಯಪುರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಎಂ.ಎಲ್‌.ಸಿ ಸಿಟಿ ರವಿ ಸದನದಲ್ಲಿ ಅಶ್ಲೀಲ ಪದ ಬಳಕೆಗೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣ ಸಂಬಂಧ ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

ಇಂದು (ಡಿ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಐಡಿಯು ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತದೆ. ಏಕೆಂದರೆ ಅದರ ಮೇಲೆ ಒತ್ತಡಿವಿದೆ. ಆದ ಕಾರಣ ನಮಗೆ ಅದರ ಮೇಲೆ ವಿಶ್ವಾಸವಿಲ್ಲ ಅಂದು ಆರೋಪಿಸಿದರು.

ಸಿಟಿ ರವಿ ಅವರ ಮೇಲೆ ಎನ್‌ಕೌಟರ್‌ ಪ್ಲ್ಯಾನ್‌ ಕೂಡ ಮಾಡಲಾಗಿತ್ತು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಕಾಂಗ್ರೆಸ್‌ ಶತಮಾನೋತ್ಸವಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯತ್ನಾಳ್‌, ಇದು ನಕಲಿಯರು ಸೇರಿಕೊಂಡು ಮಾಡುತ್ತಿರುವ ಕಾಂಗ್ರೆಸ್‌ ಅಧಿವೇಶನ. ಗಾಂಧಿ ಹೆಸರು ಇಟ್ಟುಕೊಂಡು ಅಧಿವೇಶನ ಮಾಡುವ ಕಾರಣಕ್ಕೆ ಕಾರ್ಯಕ್ರಮಕ್ಕೆ ಪಾವಿತ್ರ್ಯತೆ ಬರುವುದಿಲ್ಲ. ಕಾಂಗ್ರೆಸ್‌ನವರು ಗಾಂಧೀಜಿಯವರನ್ನು ಮಾತ್ರ ಸ್ಮರಣೆ ಮಾಡುತ್ತಾರೆ. ಆದರೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸ್ಮರಣೆ ಮಾಡುವುದಿಲ್ಲ ಎಂದರು.

ಸನಾತನ ಧರ್ಮ ಉಳಿದರೆ ಮಾತ್ರ ಭಾರತದ ಸಂವಿಧಾನ ಉಳಿಯುವುದು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

4 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

5 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

5 hours ago