ವಿಜಯಪುರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂ.ಎಲ್.ಸಿ ಸಿಟಿ ರವಿ ಸದನದಲ್ಲಿ ಅಶ್ಲೀಲ ಪದ ಬಳಕೆಗೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣ ಸಂಬಂಧ ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ. ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಇಂದು (ಡಿ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಐಡಿಯು ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತದೆ. ಏಕೆಂದರೆ ಅದರ ಮೇಲೆ ಒತ್ತಡಿವಿದೆ. ಆದ ಕಾರಣ ನಮಗೆ ಅದರ ಮೇಲೆ ವಿಶ್ವಾಸವಿಲ್ಲ ಅಂದು ಆರೋಪಿಸಿದರು.
ಸಿಟಿ ರವಿ ಅವರ ಮೇಲೆ ಎನ್ಕೌಟರ್ ಪ್ಲ್ಯಾನ್ ಕೂಡ ಮಾಡಲಾಗಿತ್ತು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯ ಕಾಂಗ್ರೆಸ್ ಶತಮಾನೋತ್ಸವಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯತ್ನಾಳ್, ಇದು ನಕಲಿಯರು ಸೇರಿಕೊಂಡು ಮಾಡುತ್ತಿರುವ ಕಾಂಗ್ರೆಸ್ ಅಧಿವೇಶನ. ಗಾಂಧಿ ಹೆಸರು ಇಟ್ಟುಕೊಂಡು ಅಧಿವೇಶನ ಮಾಡುವ ಕಾರಣಕ್ಕೆ ಕಾರ್ಯಕ್ರಮಕ್ಕೆ ಪಾವಿತ್ರ್ಯತೆ ಬರುವುದಿಲ್ಲ. ಕಾಂಗ್ರೆಸ್ನವರು ಗಾಂಧೀಜಿಯವರನ್ನು ಮಾತ್ರ ಸ್ಮರಣೆ ಮಾಡುತ್ತಾರೆ. ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ ಮಾಡುವುದಿಲ್ಲ ಎಂದರು.
ಸನಾತನ ಧರ್ಮ ಉಳಿದರೆ ಮಾತ್ರ ಭಾರತದ ಸಂವಿಧಾನ ಉಳಿಯುವುದು ಎಂದು ಹೇಳಿದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…