ಬೆಂಗಳೂರು : ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ ಅವರನ್ನು ಮಾಜಿ ಸಚಿವ ಸಿ.ಟಿ ರವಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ನೆನ್ನೆ ವಿಜಯೇಂದ್ರ ಅವರ ನಿವಾಸದಲ್ಲಿ ಸಿ.ಟಿ ರವಿ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಿಗೆ ಶಾಲು ಹಾರ ಹಾಕಿ ಹೂ ಗುಚ್ಚ ಕೊಟ್ಟು ಆತ್ಮೀಯ ಅಪ್ಪುಗೆ ನೀಡಿ ಅಭಿನಂದಿಸಿದ್ದಾರೆ.
ಈ ಫೋಟೋಗಳನ್ನು ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇಂದು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಸಿ.ಟಿ ರವಿ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭ ಕೋರಿ, ಅವರ ಸಲಹೆ ಹಾಗೂ ಮಾರ್ಗದರ್ಶನ ಕೋರಲಾಯಿತು ಎಂದು ಬರೆದುಕೊಂಡಿದ್ದಾರೆ.
ಸಿಟಿ ರವಿ ಅವರು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು, ಅವರಿಗೆ ಈ ಪಟ್ಟ ಕೈ ತಪ್ಪಿದ್ದರಿಂದ ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು.ಇದೀಗ ಸ್ವತಃ ಸಿ.ಟಿ ರವಿ, ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದು,ಎಲ್ಲಾ ಗೊಂದಲಗಳಿಗೆ ತೆರೆ ಎಳೆದಂತಾಗಿದೆ.
ಈ ನಡುವೆ ಬಿ.ಎಸ್ ಯಡಿಯೂರಪ್ಪ ಅವರು ಅಸಮಾಧಾನಿತ ನಾಯಕರಿಗೆ ಕರೆ ಮಾಡಿ ಸಮಾಧಾನ ಪಡಿಸುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…