ರಾಜ್ಯ

ಹೆಚ್ಚು ಬಜೆಟ್‌ ಮಂಡಿಸಿದ ಜೊತೆಗೆ ಹೆಚ್ಚು ಸಾಲು ಮಾಡಿದ ಕೀರ್ತಿಯೂ ಸಿದ್ದರಾಮಯ್ಯಗೆ ಸಲ್ಲಬೇಕು : ಸಿ.ಟಿ ರವಿ ವಾಗ್ದಾಳಿ

ಮೈಸೂರು : ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಯ ಜೊತೆಗೆ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿಯು ಸಿದ್ದರಾಮಯ್ಯಗೆ ಸಲ್ಲುತ್ತದೆ. ಒಟ್ಟು ಸಮಗ್ರ ಸಾಲದ ಶೇ 50ರಷ್ಟು ಸಾಲ ಇವರೊಬ್ಬರೇ ಮಾಡಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳ ಚಾರ್ಜ್ ಶೀಟ್ ಬಿಡುಗಡೆ ಮಾಡಿ ಮಾತನಾಡಿದ ಅವರು, 2024-25 ಒಂದೇ ವರ್ಷಕ್ಕೆ 1.26 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದೇ ನಿಮ್ಮ ಸಾಧನೆನಾ.? ಹಾಲಿನಿಂದ ಆಲ್ಕೋಹಲ್‌ ವರಗೆ ಬೆಲೆ ಏರಿಸಿದ ಕೀರ್ತಿ ನಿಮ್ಮದು. ಯಾವ ಸಾಧನೆಗೆ ಸಮಾವೇಶ ಮಾಡಿದ್ದೀರಿ? ಎಂದು ಕಿಡಿಕಾರಿದರು.

ಸ್ಟಾಂಪ್ ಪೇಪರ್ ಬೆಲೆ ಏರಿಕೆ, ವಾಹನ ರಿಜಿಸ್ಟರ್ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ನಿಮ್ಮ ಸಾಧನೆನಾ? ಈ ಸರ್ಕಾರದಲ್ಲಿ ಕ್ರಿಮಿನಲ್ ಮತ್ತು ಕಮ್ಯುನಲ್ ಗಳಿಗೆ ರಾಜಾಶ್ರಯ ಇದೆ.
ಜಾತಿ ಜಾತಿಗಳ ನಡುವೆ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಹಣ ಇಲ್ಲ. ಹಾಲು ಉತ್ಪಾದಕರಿಗೆ ಸಬ್ಸಿಡಿ ಕೊಟ್ಟಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಸಾಲು ಸಾಲು ಆರೋಪ ಮಾಡಿದರು.

ಎರಡು ವರ್ಷ ಕರಾಳ ದಿನ ಅನುಭವಿಸಿದ್ದೇವೆ. ಈ ಸರ್ಕಾರದ ಅವಧಿಯಲ್ಲಿ 736 ಬಾಣಂತಿ, 1600 ಕ್ಕೂ ಹೆಚ್ಚು ಶಿಶು ಮರಣ, 3000 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಸೇರಿದಂತೆ ಹಲವು ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ನಡೆದಿವೆ.
ಸಿದ್ದರಾಮಯ್ಯ 1 ಕ್ಕೂ 2 ಕ್ಕೂ ಬಹಳ ವ್ಯತ್ಯಾಸ ಇದೆ. ಕೋಮ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

28 mins ago

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…

36 mins ago

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌…

43 mins ago

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…

1 hour ago

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

2 hours ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

2 hours ago