ರಾಜ್ಯ

ಹೆಚ್ಚು ಬಜೆಟ್‌ ಮಂಡಿಸಿದ ಜೊತೆಗೆ ಹೆಚ್ಚು ಸಾಲು ಮಾಡಿದ ಕೀರ್ತಿಯೂ ಸಿದ್ದರಾಮಯ್ಯಗೆ ಸಲ್ಲಬೇಕು : ಸಿ.ಟಿ ರವಿ ವಾಗ್ದಾಳಿ

ಮೈಸೂರು : ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಯ ಜೊತೆಗೆ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿಯು ಸಿದ್ದರಾಮಯ್ಯಗೆ ಸಲ್ಲುತ್ತದೆ. ಒಟ್ಟು ಸಮಗ್ರ ಸಾಲದ ಶೇ 50ರಷ್ಟು ಸಾಲ ಇವರೊಬ್ಬರೇ ಮಾಡಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳ ಚಾರ್ಜ್ ಶೀಟ್ ಬಿಡುಗಡೆ ಮಾಡಿ ಮಾತನಾಡಿದ ಅವರು, 2024-25 ಒಂದೇ ವರ್ಷಕ್ಕೆ 1.26 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದೇ ನಿಮ್ಮ ಸಾಧನೆನಾ.? ಹಾಲಿನಿಂದ ಆಲ್ಕೋಹಲ್‌ ವರಗೆ ಬೆಲೆ ಏರಿಸಿದ ಕೀರ್ತಿ ನಿಮ್ಮದು. ಯಾವ ಸಾಧನೆಗೆ ಸಮಾವೇಶ ಮಾಡಿದ್ದೀರಿ? ಎಂದು ಕಿಡಿಕಾರಿದರು.

ಸ್ಟಾಂಪ್ ಪೇಪರ್ ಬೆಲೆ ಏರಿಕೆ, ವಾಹನ ರಿಜಿಸ್ಟರ್ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ನಿಮ್ಮ ಸಾಧನೆನಾ? ಈ ಸರ್ಕಾರದಲ್ಲಿ ಕ್ರಿಮಿನಲ್ ಮತ್ತು ಕಮ್ಯುನಲ್ ಗಳಿಗೆ ರಾಜಾಶ್ರಯ ಇದೆ.
ಜಾತಿ ಜಾತಿಗಳ ನಡುವೆ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಹಣ ಇಲ್ಲ. ಹಾಲು ಉತ್ಪಾದಕರಿಗೆ ಸಬ್ಸಿಡಿ ಕೊಟ್ಟಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಸಾಲು ಸಾಲು ಆರೋಪ ಮಾಡಿದರು.

ಎರಡು ವರ್ಷ ಕರಾಳ ದಿನ ಅನುಭವಿಸಿದ್ದೇವೆ. ಈ ಸರ್ಕಾರದ ಅವಧಿಯಲ್ಲಿ 736 ಬಾಣಂತಿ, 1600 ಕ್ಕೂ ಹೆಚ್ಚು ಶಿಶು ಮರಣ, 3000 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಸೇರಿದಂತೆ ಹಲವು ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ನಡೆದಿವೆ.
ಸಿದ್ದರಾಮಯ್ಯ 1 ಕ್ಕೂ 2 ಕ್ಕೂ ಬಹಳ ವ್ಯತ್ಯಾಸ ಇದೆ. ಕೋಮ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago