ಬೆಂಗಳೂರು: ಇಂದು ವಿತ್ತೆ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ನೆರವು ನೀಡಿಲ್ಲ. ಈ ಬಜೆಟ್ನಿಂದ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಲೇವಡಿ ಮಾಡಿದ್ದಾರೆ.
ಬಜೆಟ್ ಬಗ್ಗೆ ಮಾತನಾಡಿರುವ ಅವರು, ಕೇಂದ್ರದ ಇಂದಿನ ಬಜೆಟ್ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್ನಿಂದ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ. ರಾಜ್ಯದ ಜನರ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ ಎಂದು ಕಿಡಿಕಾರಿದರು.
ಬಜೆಟ್ನಲ್ಲಿ ಬಿಹಾರ ರಾಜ್ಯಕ್ಕೆ ಐದಾರು ಯೋಜನೆಗಳನ್ನು ನೀಡಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಯಾವುದೇ ಯೊಜನೆಗಳಿಲ್ಲ. ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದ ಹಲವಾರು ಯೋಜನೆಗಳಿಗೆ ಅನುದಾನ ಕೋರಿದ್ದೆವು. ಆದರೆ ಏನು ನೀಡಿಲ್ಲ. ಬೆಂಗಳೂರು ನಗರ ಹೆಚ್ಚು ಉದ್ಯೋಗ ಅವಕಾಶ ನೀಡಿದೆ. ರಫ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ನೀಡುತ್ತಿದೆ. ಆದರೆ ಬೆಂಗಳೂರಿಗೂ ಯಾವುದೇ ಅನುದಾನ ನೀಡದೆ ಕಡೆಗಣಿಸಿದೆ. ಈ ನಡೆಯನ್ನು ಸರ್ಕಾರದ ಪರವಾಗಿ ನಾನು ಖಂಡಿಸುತ್ತೇನೆ ಎಂದು ಕೇಂದ್ರ ಸರ್ಕಾರದ ಪರ ವಾಗ್ದಾಳಿ ನಡೆಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…