ರಾಜ್ಯ

ಪರಂಪರೆ ಬಿಂಬಿಸುವ ವಸ್ತುಪ್ರದರ್ಶನ ಆಯೋಜನೆ: ಮಧು ಜಿ.ಮಾದೇಗೌಡ

ಮಂಡ್ಯ: ಕಲೆ, ಸಾಹಿತ್ಯ,ಸಂಸ್ಕೃತಿ, ಕೃಷಿ, ಪ್ರವಾಸೋದ್ಯಮ, ಕೈಗಾರಿಕೆ ಇತ್ಯಾದಿ ಕ್ಷೇತ್ರಗಳನ್ನು ಪ್ರತಿಬಿಂಬಿಸುವ ಮಾಹಿತಿ ಪೂರ್ಣ ಆಕರ್ಷಕವಾದ ಗುಣಮಟ್ಟದ ವಸ್ತುಪ್ರದರ್ಶನ ಅಯೋಜಿಸಲು ಅಗತ್ಯ ಕ್ರಿಯಾಯೋಜನೆ ಸಲ್ಲಿಸುವಂತೆ ವಸ್ತುಪ್ರದರ್ಶನ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಸ್ತುಪ್ರದರ್ಶನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆ, ಸಂಘ-ಸಂಸ್ಥೆಗಳು, ನಿಗಮ ಮಂಡಳಿಗಳಿಗೆ ಪತ್ರ ಬರೆದು ವಸ್ತುಪ್ರದರ್ಶನದಲ್ಲಿ ಮಳಿಗೆ ತೆರೆಯಲು ಆಹ್ವಾನಿಸುವಂತೆ ಸಮಿತಿಯ ಸದಸ್ಯ ಕಾರ್ಯದರ್ಶಿಗೆ ತಿಳಿಸಿದರು.

ವಸ್ತುಪ್ರದರ್ಶನದಲ್ಲಿ ಮಳಿಗೆಗಳನ್ನು ಲಾಟರಿ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಬೇಕು. ವಿವಾದಗಳಿಗೆ ಅಸ್ಪದವಿರಬಾರದು. ದೂಳು ರಹಿತ, ವಿಷಮುಕ್ತ ರಾಸಾಯನಿಕ ಮುಕ್ತ ಆಹಾರ, ಪ್ಲಾಸ್ಟಿಕ್ ಮುಕ್ತವಾಗಿ ಸಮ್ಮೇಳನವನ್ನು ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಸಾಹಿತಿ ಟಿ.ಸತೀಶ್ ಜವರೇಗೌಡ ಮಾತನಾಡಿ, ಸುವರ್ಣ ಕರ್ನಾಟಕ ಸಂಭ್ರಮವನ್ನು ಪ್ರತಿಬಿಂಬಿಸುವ ಮಂಡ್ಯ ಜಿಲ್ಲೆಯ ಸಾಹಿತಿಗಳ ಬದುಕು-ಬರಹ-ಸಾಧನೆ ಪರಿಚಯಿಸುವ, ಕೃಷಿ ಮತ್ತು ಪ್ರವಾಸೋದ್ಯಮ ಮಳಿಗೆಗಳನ್ನು ತೆರೆಯಬೇಕು. ಸರ್ಕಾರ ಕಾರ್ಯಕ್ರಮ-ಯೋಜನೆಗಳ ಪ್ರದರ್ಶನವಾಗದೇ ಸಾಂಸ್ಕೃತಿಕ ಪರಂಪರೆಯ ಮೇಲೆ ಬೆಳಕು ಬೀರುವ ದಿಕ್ಕಿನಲ್ಲಿ ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು, ವಿವಿಗಳು ಮತ್ತು ಕಾಲೇಜುಗಳಿಗೂ ಅವಕಾಶ ಕಲ್ಪಿಸಬೇಕು. ಚಿತ್ರಕಲೆ, ವ್ಯಂಗ್ಯಚಿತ್ರ, ಹಳೆಯ ನೋಟು-ನಾಣ್ಯಗಳು, ಜಾನಪದ ಪರಿಕರಗಳು, ಅಮೂಲ್ಯ ಪುಸ್ತಕಗಳು, ಆದಿವಾಸಿ ಸಂಸ್ಕೃತಿ ಬಿಂಬಿಸಲು ಮಳಿಗೆಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ವಸ್ತುಪ್ರದರ್ಶನ ಸಮಿತಿಯಡಿಯಲ್ಲಿ ವಿವಿಧ ಉಪ ಸಮಿತಿಗಳ ರಚಿಸಿ ಕಾರ್ಯಭಾರವನ್ನು ಹಂಚಿಕೆ ಮಾಡುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಈ ಕೆಳಕಂಡ ಉಪ ಸಮಿತಿಗಳನ್ನು ರಚಿಸಲಾಯಿತು.
– ಸರ್ಕಾರಿ ಇಲಾಖೆಗಳ ಯೋಜನೆ/ ಕಾರ್ಯಕ್ರಮಗಳು
– ವಾಣಿಜ್ಯ ಉದ್ದೇಶ
– ಆಹಾರ
– ಕೃಷಿಯನ್ನು ಪ್ರವಾಸೋದ್ಯಮದ ರೀತಿ ಉತ್ತೇಜಿಸುವುದು
– ಸಾಹಿತ್ಯ, ಸಂಸ್ಕೃತಿ, ಪರಂಪರೆ ಬಿಂಬಿಸುವ ಉಪ ಸಮಿತಿ ರಚಿಸಲು ಸಮಿತಿ ತೀರ್ಮಾನಿಸಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್.ಅಶೋಕ, ಸಂಚಾಲಕ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ರಾಘವೇಂದ್ರ, ತೋಟಗಾರಿಕೆ ಉಪ ನಿರ್ದೇಶಕಿ ರೂಪಶ್ರೀ, ಕೃಷಿ ಇಲಾಖೆ ಉಪ ನಿರ್ದೇಶಕಿ ಮಾಲತಿ, ಸಮಿತಿಯ ಸದಸ್ಯರಾದ ಸತೀಶ್ ಜವರೇಗೌಡ, ಜಿ.ಶ್ರೀಹರ್ಷ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಬಾಬಾ ಸಾಹೇಬ್ ಸೇರಿದಂತೆ ಹಲವರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

31 mins ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

1 hour ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

7 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

7 hours ago