ರಾಜ್ಯ

ಪರಂಪರೆ ಬಿಂಬಿಸುವ ವಸ್ತುಪ್ರದರ್ಶನ ಆಯೋಜನೆ: ಮಧು ಜಿ.ಮಾದೇಗೌಡ

ಮಂಡ್ಯ: ಕಲೆ, ಸಾಹಿತ್ಯ,ಸಂಸ್ಕೃತಿ, ಕೃಷಿ, ಪ್ರವಾಸೋದ್ಯಮ, ಕೈಗಾರಿಕೆ ಇತ್ಯಾದಿ ಕ್ಷೇತ್ರಗಳನ್ನು ಪ್ರತಿಬಿಂಬಿಸುವ ಮಾಹಿತಿ ಪೂರ್ಣ ಆಕರ್ಷಕವಾದ ಗುಣಮಟ್ಟದ ವಸ್ತುಪ್ರದರ್ಶನ ಅಯೋಜಿಸಲು ಅಗತ್ಯ ಕ್ರಿಯಾಯೋಜನೆ ಸಲ್ಲಿಸುವಂತೆ ವಸ್ತುಪ್ರದರ್ಶನ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಸ್ತುಪ್ರದರ್ಶನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆ, ಸಂಘ-ಸಂಸ್ಥೆಗಳು, ನಿಗಮ ಮಂಡಳಿಗಳಿಗೆ ಪತ್ರ ಬರೆದು ವಸ್ತುಪ್ರದರ್ಶನದಲ್ಲಿ ಮಳಿಗೆ ತೆರೆಯಲು ಆಹ್ವಾನಿಸುವಂತೆ ಸಮಿತಿಯ ಸದಸ್ಯ ಕಾರ್ಯದರ್ಶಿಗೆ ತಿಳಿಸಿದರು.

ವಸ್ತುಪ್ರದರ್ಶನದಲ್ಲಿ ಮಳಿಗೆಗಳನ್ನು ಲಾಟರಿ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಬೇಕು. ವಿವಾದಗಳಿಗೆ ಅಸ್ಪದವಿರಬಾರದು. ದೂಳು ರಹಿತ, ವಿಷಮುಕ್ತ ರಾಸಾಯನಿಕ ಮುಕ್ತ ಆಹಾರ, ಪ್ಲಾಸ್ಟಿಕ್ ಮುಕ್ತವಾಗಿ ಸಮ್ಮೇಳನವನ್ನು ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಸಾಹಿತಿ ಟಿ.ಸತೀಶ್ ಜವರೇಗೌಡ ಮಾತನಾಡಿ, ಸುವರ್ಣ ಕರ್ನಾಟಕ ಸಂಭ್ರಮವನ್ನು ಪ್ರತಿಬಿಂಬಿಸುವ ಮಂಡ್ಯ ಜಿಲ್ಲೆಯ ಸಾಹಿತಿಗಳ ಬದುಕು-ಬರಹ-ಸಾಧನೆ ಪರಿಚಯಿಸುವ, ಕೃಷಿ ಮತ್ತು ಪ್ರವಾಸೋದ್ಯಮ ಮಳಿಗೆಗಳನ್ನು ತೆರೆಯಬೇಕು. ಸರ್ಕಾರ ಕಾರ್ಯಕ್ರಮ-ಯೋಜನೆಗಳ ಪ್ರದರ್ಶನವಾಗದೇ ಸಾಂಸ್ಕೃತಿಕ ಪರಂಪರೆಯ ಮೇಲೆ ಬೆಳಕು ಬೀರುವ ದಿಕ್ಕಿನಲ್ಲಿ ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು, ವಿವಿಗಳು ಮತ್ತು ಕಾಲೇಜುಗಳಿಗೂ ಅವಕಾಶ ಕಲ್ಪಿಸಬೇಕು. ಚಿತ್ರಕಲೆ, ವ್ಯಂಗ್ಯಚಿತ್ರ, ಹಳೆಯ ನೋಟು-ನಾಣ್ಯಗಳು, ಜಾನಪದ ಪರಿಕರಗಳು, ಅಮೂಲ್ಯ ಪುಸ್ತಕಗಳು, ಆದಿವಾಸಿ ಸಂಸ್ಕೃತಿ ಬಿಂಬಿಸಲು ಮಳಿಗೆಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ವಸ್ತುಪ್ರದರ್ಶನ ಸಮಿತಿಯಡಿಯಲ್ಲಿ ವಿವಿಧ ಉಪ ಸಮಿತಿಗಳ ರಚಿಸಿ ಕಾರ್ಯಭಾರವನ್ನು ಹಂಚಿಕೆ ಮಾಡುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಈ ಕೆಳಕಂಡ ಉಪ ಸಮಿತಿಗಳನ್ನು ರಚಿಸಲಾಯಿತು.
– ಸರ್ಕಾರಿ ಇಲಾಖೆಗಳ ಯೋಜನೆ/ ಕಾರ್ಯಕ್ರಮಗಳು
– ವಾಣಿಜ್ಯ ಉದ್ದೇಶ
– ಆಹಾರ
– ಕೃಷಿಯನ್ನು ಪ್ರವಾಸೋದ್ಯಮದ ರೀತಿ ಉತ್ತೇಜಿಸುವುದು
– ಸಾಹಿತ್ಯ, ಸಂಸ್ಕೃತಿ, ಪರಂಪರೆ ಬಿಂಬಿಸುವ ಉಪ ಸಮಿತಿ ರಚಿಸಲು ಸಮಿತಿ ತೀರ್ಮಾನಿಸಿತು.

ಸಮಿತಿಯ ಸದಸ್ಯ ಕಾರ್ಯದರ್ಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್.ಅಶೋಕ, ಸಂಚಾಲಕ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ರಾಘವೇಂದ್ರ, ತೋಟಗಾರಿಕೆ ಉಪ ನಿರ್ದೇಶಕಿ ರೂಪಶ್ರೀ, ಕೃಷಿ ಇಲಾಖೆ ಉಪ ನಿರ್ದೇಶಕಿ ಮಾಲತಿ, ಸಮಿತಿಯ ಸದಸ್ಯರಾದ ಸತೀಶ್ ಜವರೇಗೌಡ, ಜಿ.ಶ್ರೀಹರ್ಷ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಬಾಬಾ ಸಾಹೇಬ್ ಸೇರಿದಂತೆ ಹಲವರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago