Mysore
28
broken clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳಿಗೆ ಕಡಿವಾಣ : ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಪರಮೇಶ್ವರ್‌

Dharmasthala dead bodies burried case

ಬೆಂಗಳೂರು : ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಮ್, ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ದೇಶಾದ್ಯಂತ ಭಾರಿ ತಲೆನೋವಾಗಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವುದು, ಆನ್‍ಲೈನ್ ಗ್ಯಾಂಬ್ಲಿಂಗ್, ದ್ವೇಷ ಭಾಷಣ ಹಾಗೂ ಭಾವನಾತಕ ಪ್ರಚೋದನೆಗಳ ವಿರುದ್ಧ ಕಠಿಣ ಕಾನೂನುಗಳನ್ನು ತರಲು ರಾಜ್ಯಸರ್ಕಾರ ಮುಂದಾಗಿದೆ.

ಈ ಮೊದಲು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರು ಆನ್‍ಲೈನ್ ಗೇಮ್‍ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ಕೆಲವು ಘಟನೆಗಳಲ್ಲಿ ಆನ್‍ಲೈನ್ ಗೇಮ್ ಚಟಕ್ಕೆ ಒಳಗಾದ ಕೆಲವರು ಆತಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳು ವರದಿಯಾಗಿದ್ದವು. ಮುಂದಿನ ಅಧಿವೇಶನದ ಒಳಗೆ ಕಠಿಣ ಕಾನೂನುಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ. ಅದೇ ರೀತಿ ಸುಳ್ಳು ಸುದ್ದಿಗಳು ವದಂತಿಗಳು ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿ ಕೊಡುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಭೆಯ ಅಧ್ಯಕ್ಷತೆ ವಹಿಸಿದ ಸಚಿವ ಪರಮೇಶ್ವೆರ್ ಗೃಹ ಇಲಾಖೆಯಿಂದ ರೂಪಿಸಬೇಕಾದ ನಿಯಮಾವಳಿಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

Tags:
error: Content is protected !!