Dharmasthala dead bodies burried case
ಬೆಂಗಳೂರು : ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಮ್, ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ದೇಶಾದ್ಯಂತ ಭಾರಿ ತಲೆನೋವಾಗಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವುದು, ಆನ್ಲೈನ್ ಗ್ಯಾಂಬ್ಲಿಂಗ್, ದ್ವೇಷ ಭಾಷಣ ಹಾಗೂ ಭಾವನಾತಕ ಪ್ರಚೋದನೆಗಳ ವಿರುದ್ಧ ಕಠಿಣ ಕಾನೂನುಗಳನ್ನು ತರಲು ರಾಜ್ಯಸರ್ಕಾರ ಮುಂದಾಗಿದೆ.
ಈ ಮೊದಲು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರು ಆನ್ಲೈನ್ ಗೇಮ್ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ಕೆಲವು ಘಟನೆಗಳಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಒಳಗಾದ ಕೆಲವರು ಆತಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳು ವರದಿಯಾಗಿದ್ದವು. ಮುಂದಿನ ಅಧಿವೇಶನದ ಒಳಗೆ ಕಠಿಣ ಕಾನೂನುಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ. ಅದೇ ರೀತಿ ಸುಳ್ಳು ಸುದ್ದಿಗಳು ವದಂತಿಗಳು ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿ ಕೊಡುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಭೆಯ ಅಧ್ಯಕ್ಷತೆ ವಹಿಸಿದ ಸಚಿವ ಪರಮೇಶ್ವೆರ್ ಗೃಹ ಇಲಾಖೆಯಿಂದ ರೂಪಿಸಬೇಕಾದ ನಿಯಮಾವಳಿಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…