Dharmasthala dead bodies burried case
ಬೆಂಗಳೂರು : ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಮ್, ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ದೇಶಾದ್ಯಂತ ಭಾರಿ ತಲೆನೋವಾಗಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವುದು, ಆನ್ಲೈನ್ ಗ್ಯಾಂಬ್ಲಿಂಗ್, ದ್ವೇಷ ಭಾಷಣ ಹಾಗೂ ಭಾವನಾತಕ ಪ್ರಚೋದನೆಗಳ ವಿರುದ್ಧ ಕಠಿಣ ಕಾನೂನುಗಳನ್ನು ತರಲು ರಾಜ್ಯಸರ್ಕಾರ ಮುಂದಾಗಿದೆ.
ಈ ಮೊದಲು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರು ಆನ್ಲೈನ್ ಗೇಮ್ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ಕೆಲವು ಘಟನೆಗಳಲ್ಲಿ ಆನ್ಲೈನ್ ಗೇಮ್ ಚಟಕ್ಕೆ ಒಳಗಾದ ಕೆಲವರು ಆತಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳು ವರದಿಯಾಗಿದ್ದವು. ಮುಂದಿನ ಅಧಿವೇಶನದ ಒಳಗೆ ಕಠಿಣ ಕಾನೂನುಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ. ಅದೇ ರೀತಿ ಸುಳ್ಳು ಸುದ್ದಿಗಳು ವದಂತಿಗಳು ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿ ಕೊಡುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಭೆಯ ಅಧ್ಯಕ್ಷತೆ ವಹಿಸಿದ ಸಚಿವ ಪರಮೇಶ್ವೆರ್ ಗೃಹ ಇಲಾಖೆಯಿಂದ ರೂಪಿಸಬೇಕಾದ ನಿಯಮಾವಳಿಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…