ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಅಹಮ್ಮದ್‌ ವಿರುದ್ಧ ಪ್ರಮೋದ್‌ ಮುತಾಲಿಕ್‌ ಆಕ್ರೋಶ

ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ನೀಚ ಕೃತ್ಯ. ರಾಜ್ಯದಲ್ಲಿ ಇಸ್ಲಾಮಿಕ್‌ ಶಕ್ತಿಯ ಪ್ರದರ್ಶನ ಆಗುತ್ತಿದೆ. ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಜಮೀರ್‌ ಅಹಮ್ಮದ್‌ ಖಾನ್‌ ಅವರೇ, ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲ, ಅದು ನಮಗೆ ಅನ್ನ ನೀಡುತ್ತದೆ. ಗೊಬ್ಬರ ಕೊಡುತ್ತದೆ. ಔಷಧಿ ಕೊಡುತ್ತದೆ. ಇದೆಲ್ಲದರ ಜೊತೆಗೆ ಅದು ರೈತರ ಬೆನ್ನೆಲುಬು ಸಹ ಹೌದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೆ ಶ್ರೀರಾಮ ಸೇನೆಯಿಂದ ಜಮೀರ್‌ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹಸುವಿನ ಕೆಚ್ಚಲು ಕೊಯ್ದಿರುವುದನ್ನು ನೋಡಿದರೆ ಸುಮ್ಮನೆ ಇರಲು ಆಗಲ್ಲ. ಇದನ್ನು ಖಂಡಿಸುತ್ತೇನೆ. ನಿಮ್ಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರವನ್ನು ನೀವೇ ಕೊಡಬೇಕು. ನೀವೇ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

40 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago