ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೆ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ನೀಚ ಕೃತ್ಯ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ. ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಮೀರ್ ಅಹಮ್ಮದ್ ಖಾನ್ ಅವರೇ, ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲ, ಅದು ನಮಗೆ ಅನ್ನ ನೀಡುತ್ತದೆ. ಗೊಬ್ಬರ ಕೊಡುತ್ತದೆ. ಔಷಧಿ ಕೊಡುತ್ತದೆ. ಇದೆಲ್ಲದರ ಜೊತೆಗೆ ಅದು ರೈತರ ಬೆನ್ನೆಲುಬು ಸಹ ಹೌದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೆ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹಸುವಿನ ಕೆಚ್ಚಲು ಕೊಯ್ದಿರುವುದನ್ನು ನೋಡಿದರೆ ಸುಮ್ಮನೆ ಇರಲು ಆಗಲ್ಲ. ಇದನ್ನು ಖಂಡಿಸುತ್ತೇನೆ. ನಿಮ್ಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರವನ್ನು ನೀವೇ ಕೊಡಬೇಕು. ನೀವೇ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…