ರಾಜ್ಯ

ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ

ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ತಟ್ಟಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಶೀತಗಾಳಿ ಹಾಗೂ ಚಳಿಗೆ ಜನತೆ ತತ್ತರಿಸಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಮೈ ಕೊರೆಯುವ ಚಳಿಯೊಂದಿಗೆ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ತೀವ್ರ ತಂಡಿಗೆ ಜನರು ಥಂಡ ಹೊಡೆದಿದ್ದಾರೆ. ಮುಂಜಾನೆ ಮತ್ತು ಸಂಜೆ ವೇಳೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ, ಭಾರೀ ಚಳಿಯಿಂದ ಮನೆಯಿಂದ ಹೊರಬರದಂತಹ ವಾತಾವರಣ ನಿರ್ಮಾಣವಾಗಿದೆ.

ದಿನವಿಡೀ ಮೋಡ ಕವಿದಿದ್ದು, ಇನ್ನೆರೆಡು ಮೂರು ದಿನ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಎರಡನೇ ಮದುವೆ ಆದ ನಟಿ ಸಮಂತಾ : ʻದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸಬಾಳು

ದಕ್ಷಿಣ ಒಳನಾಡು, ಕರಾವ ಳಿ ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದ.ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌‍ ಇದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌‍ಗೆ ಇಳಿದಿದ್ದು, ಚಳಿಯಿಂದ ಬೆಚ್ಚಗಿರಲಿ ಜನರು ಸ್ವೆಟ್ಟರ್‌, ಟೋಪಿ, ಜರ್ಕಿನ್‌ಗಳ ಖರೀದಿಯಲ್ಲಿ ತೊಡಗಿದ್ದಾರೆ. ದಿಢೀರನೆ ಬದಲಾದ ಹವಾಮಾನದಿಂದ ಜ್ವರ, ಶೀತ, ಕೆಮ್ಮು ಹೆಚ್ಚಾಗುವ ಸಾಧ್ಯತೆಯಿದ್ದು, ಆರೋಗ್ಯದತ್ತ ಗಮನ ಹರಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದು, ಆದಷ್ಟು ಬಿಸಿನೀರು, ಬಿಸಿ ಆಹಾರ ಪದಾರ್ಥ ಹಾಗೂ ದೇಹವನ್ನು ಆದಷ್ಟು ಬೆಚ್ಚಗಿಟ್ಟುಕೊಳ್ಳುವಂತೆ ಕರೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

1 hour ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

1 hour ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

1 hour ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

1 hour ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

1 hour ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

1 hour ago