ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ತಟ್ಟಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಶೀತಗಾಳಿ ಹಾಗೂ ಚಳಿಗೆ ಜನತೆ ತತ್ತರಿಸಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಮೈ ಕೊರೆಯುವ ಚಳಿಯೊಂದಿಗೆ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ತೀವ್ರ ತಂಡಿಗೆ ಜನರು ಥಂಡ ಹೊಡೆದಿದ್ದಾರೆ. ಮುಂಜಾನೆ ಮತ್ತು ಸಂಜೆ ವೇಳೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ, ಭಾರೀ ಚಳಿಯಿಂದ ಮನೆಯಿಂದ ಹೊರಬರದಂತಹ ವಾತಾವರಣ ನಿರ್ಮಾಣವಾಗಿದೆ.
ದಿನವಿಡೀ ಮೋಡ ಕವಿದಿದ್ದು, ಇನ್ನೆರೆಡು ಮೂರು ದಿನ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಎರಡನೇ ಮದುವೆ ಆದ ನಟಿ ಸಮಂತಾ : ʻದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸಬಾಳು
ದಕ್ಷಿಣ ಒಳನಾಡು, ಕರಾವ ಳಿ ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದ.ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದು, ಚಳಿಯಿಂದ ಬೆಚ್ಚಗಿರಲಿ ಜನರು ಸ್ವೆಟ್ಟರ್, ಟೋಪಿ, ಜರ್ಕಿನ್ಗಳ ಖರೀದಿಯಲ್ಲಿ ತೊಡಗಿದ್ದಾರೆ. ದಿಢೀರನೆ ಬದಲಾದ ಹವಾಮಾನದಿಂದ ಜ್ವರ, ಶೀತ, ಕೆಮ್ಮು ಹೆಚ್ಚಾಗುವ ಸಾಧ್ಯತೆಯಿದ್ದು, ಆರೋಗ್ಯದತ್ತ ಗಮನ ಹರಿಸುವುದು ಸೂಕ್ತ ಎಂದು ವೈದ್ಯರು ತಿಳಿಸಿದ್ದು, ಆದಷ್ಟು ಬಿಸಿನೀರು, ಬಿಸಿ ಆಹಾರ ಪದಾರ್ಥ ಹಾಗೂ ದೇಹವನ್ನು ಆದಷ್ಟು ಬೆಚ್ಚಗಿಟ್ಟುಕೊಳ್ಳುವಂತೆ ಕರೆ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…