ರಾಜ್ಯ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏರ್ಪಟ್ಟಿರುವ ಪರಿಣಾಮ ಸಿಲಿಕಾನ್‌ ಸಿಟಿಯಲ್ಲಿ ಇಂದು ವರ್ಷದ ಮೊದಲ ಮಳೆಯಾಗಿದ್ದು, ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶ್ರೀಲಂಕಾದ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಪ್ರಭಾವ ಬೀರಿದ್ದು, ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಮಳೆಯಾಗಲಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿಂದು ಬೆಳ್ಳಂಬೆಳಿಗ್ಗೆಯೇ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇನ್ನು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹವಾಮಾನದ ಮೇಲೆ ಚಂಡಮಾರುತದ ಪ್ರಭಾವ ಬೀರಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.

ಉಳಿದಂತೆ ಜನವರಿ.24 ರವರೆಗೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶುಷ್ಕ ಹವಾಮಾನ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಇಬ್ಬನಿ ಬೀಳುವ ಮುನ್ಸೂಚನೆ ಲಭ್ಯವಾಗಿದೆ. ಆದರೆ ಬೀದರ್‌, ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಿಗೆ ತೀವ್ರ ಶೀತ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

14 mins ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

1 hour ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

2 hours ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

2 hours ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

3 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

3 hours ago