ಬೆಂಗಳೂರು: ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆ
ಬೆಂಗಳೂರಿನ ವಿಕ್ಟೋರಿಯಾ ಆಸಪತ್ರೆಯಲ್ಲಿ ತಡರಾತ್ರಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಿನ್ನೆ ಬೆಳಿಗ್ಗೆ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟಿದ್ದರು.
ಅಕ್ಟೋಬರ್.7ರಂದು ಬೆಂಗಳುರು ದಕ್ಷಿಣ ಜಿಲ್ಲೆ ರಾಮನಗರ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಶೆಡ್ನಲ್ಲಿ ಘಟನೆ ನಡೆದಿತ್ತು. ಪಶ್ಚಿಮ ಬಂಗಾಳ ಮೂಲದ 7 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಐವರು ಮೃತಪಟ್ಟಿದ್ದಾರೆ.





