ರಾಜ್ಯ

ಡಿ ಗ್ಯಾಂಗ್ ವಿಚಾರಣೆ ಫೆಬ್ರವರಿ.25ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ದರ್ಶನ್‌ ಸೇರಿದಂತೆ ಡಿ ಗ್ಯಾಂಗ್‌ನ ಹಲವು ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದು, ಫೆಬ್ರವರಿ.27ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ವಿಚಾರಣೆಗಾಗಿ ಇಂದು(ಜನವರಿ.10) ಹೈಕೋರ್ಟ್‌ನ 57ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ದರ್ಶನ್‌ ಸೇರಿದಂತೆ ಡಿ ಗ್ಯಾಂಗ್‌ನ ಹಲವು ಆರೋಪಿಗಳು ಮುಖಾಮುಖಿಯಾಗಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ 57ನೇ ಸಿಸಿಎಚ್‌ನ ಏಕ ಸದಸ್ಯ ಪೀಠದ ನ್ಯಾಯಾಧೀಶರು ಫೆಬ್ರವರಿ.25ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ.

ಈ‌ ಅರ್ಜಿ ವಿಚಾರಣೆ ಮುಗಿದ ಬಳಿಕ ಆರೋಪಿ ಪವಿತ್ರಾ ಗೌಡ ಕೋರ್ಟ್ ಹಾಲ್‌ನಲ್ಲಿಯೇ ಆರೋಪಿ ದರ್ಶನ್‌ ಅವರನ್ನು ಆರು ತಿಂಗಳ ನಂತರ ನೋಡಿ ಭಾವುಕರಾಗಿದ್ದು, ಆರೋಗ್ಯವನ್ನು ವಿಚಾರಿಸಿದ್ದಾರೆ. ಆ ವೇಳೆ ದರ್ಶನ್‌ ಬೆನ್ನುತಟ್ಟಿ ಸಂತೈಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಪವಿತ್ರಾಗೌಡ ಪರ ವಕೀಲರು ಒಂದು ತಿಂಗಳ ಕಾಲ ಹೊರ ರಾಜ್ಯದ ದೇವಾಲಯಗಳಿಗೆ ಪ್ರವಾಸ ಹೋಗುವಂತೆ ಅನುಮತಿ ನೀಡಬೇಕು ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ನಟ ದರ್ಶನ್‌ ಮತ್ತು ಆರೋಪಿ ಪವಿತ್ರಾ ಗೌಡ ಸೇರಿದಂತೆ ಹಲವರಿಗೆ ಕೆಲ ದಿನಗಳ ಹಿಂದೆ ಹೈಕೋರ್ಟ್‌ನ ಏಕ ಸದಸ್ಯ ಪೀಠದಿಂದ ರೆಗ್ಯುಲರ್‌ ಜಾಮೀನನ್ನು ಮಂಜೂರು ಮಾಡಲಾಗಿತ್ತು. ಈ ಜಾಮೀನನ್ನು ನೀಡುವ ವೇಳೆ ಆರೋಪಿಗಳು ಪ್ರತಿ ತಿಂಗಳು ಕೋರ್ಟ್‌ಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಈ ವಿಚಾರವಾಗಿ ನಟ ದರ್ಶನ್‌ ಮತ್ತು ಪವಿತ್ರಾ ಸೇರಿದಂತೆ ಇನ್ನುಳಿದ ಆರೋಪಿಗಳು 57ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ಎಲ್ಲ ಆರೋಪಿಗಳು ಮುಖಾಮುಖಿಯಾಗಿ ನ್ಯಾಯಾಧೀಶ ಮುಂದೆ ಹಾಜರಾಗಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

10 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

10 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

11 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

12 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

16 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

16 hours ago