ರಾಜ್ಯ

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ ನೆರೆದಿತ್ತು. ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು, ಇಂದು ಇಡೀ ದಿನ ಶುಭ ಹಾರೈಕೆಗಳು ಪೂಜೆ ಉಡುಗೊರೆಗಳ ವಿನಿಮಯವಾಗಿದೆ. ನಿನ್ನೆ ರಾತ್ರಿ ಅಭಿಮಾನಿಗಳು ಬೆಳ್ಳಿಯ ಜೋಡಿ ಆನೆ ಪ್ರತಿಕೃತಿಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ಉಡುಗೊರೆ ನೀಡಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್‍ಗೌಡ ಹಾಗೂ ಇತರರು ವ್ಯವಸ್ಥೆ ಮಾಡಿದ್ದ ಬೃಹತ್ ಕೇಕ್ ಅನ್ನು ಡಿ.ಕೆ.ಶಿವಕುಮಾರ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇಂದು ಬೆಳಗ್ಗೆ ದೇವಸ್ಥಾನಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಪುರೋಹಿತರ ನಿಯೋಗ ಡಿ.ಕೆ.ಶಿವಕುಮಾರ್ ಅವರ ಮನೆ ಬಳಿ ಬಂದು ಆಶೀರ್ವವದಿಸಿದರು.

ಶುಭ ಹಾರೈಸಲು ಕಾರ್ಯಕರ್ತರು ಹಾಗೂ ಮುಖಂಡರ ದಂಡೇ ನೆರೆದಿತ್ತು. ಸದಾಶಿವನಗರದ ಮನೆಯ ಸುತ್ತಮುತ್ತ ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು.

ಸದ್ದು ಮಾಡಿದ ಮುಖ್ಯಮಂತ್ರಿ ಹುದ್ದೆ
ಹುಟ್ಟುಹಬ್ಬದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಹೈಕಮಾಂಡ್ ಕೊಡುಗೆ ನೀಡಬಹುದೆಂದು ಕಾರ್ಯಕರ್ತರು ನಿರೀಕ್ಷಿಸಿದ್ದರು. ಆದರೆ ಅದು ಈಡೇರಿಲ್ಲ.
ಬೆಳಗಾವಿಯಲ್ಲಿ ಅಳವಡಿಸಲಾಗಿರುವ ಬ್ಯಾನರ್‍ನಲ್ಲಿ ಮುಂದಿನ ಮುಖ್ಯಮಂತ್ರಿ ಎಂದು ಉಲ್ಲೇಖಿಸಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರು ರಾಮದೇವ್ ಸರ್ಕಲ್‍ನಲ್ಲಿ ಅಳವಡಿಸಿರುವ ಬ್ಯಾನರ್‍ನಲ್ಲಿ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಉಲ್ಲೇಖಿಸಲಾಗಿದೆ.

ಇಂದು ಡಿ.ಕೆ.ಶಿವಕುಮಾರ್ ಮನೆಯ ಬಳಿ ಉಡುಗೊರೆಯಾಗಿ ನೀಡಲಾದ ದೊಡ್ಡ ಗಾತ್ರದ ಭಾವಚಿತ್ರದಲ್ಲೂ ಮುಂದಿನ ಮುಖ್ಯಮಂತ್ರಿ ಎಂದು ನಮೂದಿಸಲಾಗಿತ್ತು. ಅದನ್ನು ಕಂಡೂ ಕಾಣದಂತೆ ಡಿ.ಕೆ.ಶಿವಕುಮಾರ್ ಜಾಣ ನಡೆ ಅನುಸರಿಸಿದರು.

 

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

54 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago