ರಾಜ್ಯ

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ ನೆರೆದಿತ್ತು. ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು, ಇಂದು ಇಡೀ ದಿನ ಶುಭ ಹಾರೈಕೆಗಳು ಪೂಜೆ ಉಡುಗೊರೆಗಳ ವಿನಿಮಯವಾಗಿದೆ. ನಿನ್ನೆ ರಾತ್ರಿ ಅಭಿಮಾನಿಗಳು ಬೆಳ್ಳಿಯ ಜೋಡಿ ಆನೆ ಪ್ರತಿಕೃತಿಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ಉಡುಗೊರೆ ನೀಡಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್‍ಗೌಡ ಹಾಗೂ ಇತರರು ವ್ಯವಸ್ಥೆ ಮಾಡಿದ್ದ ಬೃಹತ್ ಕೇಕ್ ಅನ್ನು ಡಿ.ಕೆ.ಶಿವಕುಮಾರ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇಂದು ಬೆಳಗ್ಗೆ ದೇವಸ್ಥಾನಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಪುರೋಹಿತರ ನಿಯೋಗ ಡಿ.ಕೆ.ಶಿವಕುಮಾರ್ ಅವರ ಮನೆ ಬಳಿ ಬಂದು ಆಶೀರ್ವವದಿಸಿದರು.

ಶುಭ ಹಾರೈಸಲು ಕಾರ್ಯಕರ್ತರು ಹಾಗೂ ಮುಖಂಡರ ದಂಡೇ ನೆರೆದಿತ್ತು. ಸದಾಶಿವನಗರದ ಮನೆಯ ಸುತ್ತಮುತ್ತ ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು.

ಸದ್ದು ಮಾಡಿದ ಮುಖ್ಯಮಂತ್ರಿ ಹುದ್ದೆ
ಹುಟ್ಟುಹಬ್ಬದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಹೈಕಮಾಂಡ್ ಕೊಡುಗೆ ನೀಡಬಹುದೆಂದು ಕಾರ್ಯಕರ್ತರು ನಿರೀಕ್ಷಿಸಿದ್ದರು. ಆದರೆ ಅದು ಈಡೇರಿಲ್ಲ.
ಬೆಳಗಾವಿಯಲ್ಲಿ ಅಳವಡಿಸಲಾಗಿರುವ ಬ್ಯಾನರ್‍ನಲ್ಲಿ ಮುಂದಿನ ಮುಖ್ಯಮಂತ್ರಿ ಎಂದು ಉಲ್ಲೇಖಿಸಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರು ರಾಮದೇವ್ ಸರ್ಕಲ್‍ನಲ್ಲಿ ಅಳವಡಿಸಿರುವ ಬ್ಯಾನರ್‍ನಲ್ಲಿ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಉಲ್ಲೇಖಿಸಲಾಗಿದೆ.

ಇಂದು ಡಿ.ಕೆ.ಶಿವಕುಮಾರ್ ಮನೆಯ ಬಳಿ ಉಡುಗೊರೆಯಾಗಿ ನೀಡಲಾದ ದೊಡ್ಡ ಗಾತ್ರದ ಭಾವಚಿತ್ರದಲ್ಲೂ ಮುಂದಿನ ಮುಖ್ಯಮಂತ್ರಿ ಎಂದು ನಮೂದಿಸಲಾಗಿತ್ತು. ಅದನ್ನು ಕಂಡೂ ಕಾಣದಂತೆ ಡಿ.ಕೆ.ಶಿವಕುಮಾರ್ ಜಾಣ ನಡೆ ಅನುಸರಿಸಿದರು.

 

ಆಂದೋಲನ ಡೆಸ್ಕ್

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

1 hour ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

4 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

5 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

8 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

8 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

14 hours ago