ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ.
ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಜಿ.ಪರಮೇಶ್ವರ ಅನುಮೋದಿಸಿದ್ದಾರೆ. ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಿಸಿದರು. ಸಿದ್ದರಾಮಯ್ಯ ಘೋಷಣೆಗೆ ಪರಮೇಶ್ವರ್ ಅನುಮೋದನೆ ನೀಡಿದರು. ಐದು ನಿಮಿಷದಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಿತು.
ಇದೇ ಹೊತ್ತಲ್ಲಿ ಸಿಎಲ್ಪಿ ಸಭೆಗೆ 10 ನಿಮಿಷ ಬ್ರೇಕ್ ತೆಗೆದುಕೊಳ್ಳಲಾಯಿತು. ಈ ವೇಳೆ, ಸಿಎಂ ಕಚೇರಿಗೆ ಕೆ.ಸಿ.ವೇಣುಗೋಪಾಲ್ ಆಗಮಿಸಿದರು. ಡಿಕೆಶಿ ಬಿಟ್ಟು ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ, ವೇಣುಗೋಪಾಲ್, ಸುರ್ಜೇವಾಲಾ ಪ್ರತ್ಯೇಕವಾಗಿ ಸಭೆ ನಡೆಸಿದರು. ಕೆ.ಸಿ.ವೇಣುಗೋಪಾಲ್ ಅವರು ರಾಹುಲ್ ಗಾಂಧಿಗೆ ಕರೆ ಮಾಡಿ, ಸಿದ್ದರಾಮಯ್ಯ ರಾಜೀನಾಮೆ ಅಧಿಕೃತವಾಗಿ ತಿಳಿಸಿದರು. ಎಐಸಿಸಿ ಆದೇಶದ ಮೇರೆಗೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪೂರ್ಣಗೊಂಡಿತು. ಸಭೆ ಬಳಿಕ ಮತ್ತೆ ಸಿಎಲ್ಪಿ ಸಭೆಯಲ್ಲಿ ಪಾಲ್ಗೊಂಡರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆಶಿ ಆಯ್ಕೆ ಸುಸೂತ್ರವಾಗಿ ನಡೆಯಿತು. ಈಗ ಡಿ.ಕೆ.ಶಿವಕುಮಾರ್ 10 ನಾಯಕರ ಜೊತೆಗೂಡಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಬುಧವಾರ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…