ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ.
ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಜಿ.ಪರಮೇಶ್ವರ ಅನುಮೋದಿಸಿದ್ದಾರೆ. ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಿಸಿದರು. ಸಿದ್ದರಾಮಯ್ಯ ಘೋಷಣೆಗೆ ಪರಮೇಶ್ವರ್ ಅನುಮೋದನೆ ನೀಡಿದರು. ಐದು ನಿಮಿಷದಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಿತು.
ಇದೇ ಹೊತ್ತಲ್ಲಿ ಸಿಎಲ್ಪಿ ಸಭೆಗೆ 10 ನಿಮಿಷ ಬ್ರೇಕ್ ತೆಗೆದುಕೊಳ್ಳಲಾಯಿತು. ಈ ವೇಳೆ, ಸಿಎಂ ಕಚೇರಿಗೆ ಕೆ.ಸಿ.ವೇಣುಗೋಪಾಲ್ ಆಗಮಿಸಿದರು. ಡಿಕೆಶಿ ಬಿಟ್ಟು ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ, ವೇಣುಗೋಪಾಲ್, ಸುರ್ಜೇವಾಲಾ ಪ್ರತ್ಯೇಕವಾಗಿ ಸಭೆ ನಡೆಸಿದರು. ಕೆ.ಸಿ.ವೇಣುಗೋಪಾಲ್ ಅವರು ರಾಹುಲ್ ಗಾಂಧಿಗೆ ಕರೆ ಮಾಡಿ, ಸಿದ್ದರಾಮಯ್ಯ ರಾಜೀನಾಮೆ ಅಧಿಕೃತವಾಗಿ ತಿಳಿಸಿದರು. ಎಐಸಿಸಿ ಆದೇಶದ ಮೇರೆಗೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪೂರ್ಣಗೊಂಡಿತು. ಸಭೆ ಬಳಿಕ ಮತ್ತೆ ಸಿಎಲ್ಪಿ ಸಭೆಯಲ್ಲಿ ಪಾಲ್ಗೊಂಡರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆಶಿ ಆಯ್ಕೆ ಸುಸೂತ್ರವಾಗಿ ನಡೆಯಿತು. ಈಗ ಡಿ.ಕೆ.ಶಿವಕುಮಾರ್ 10 ನಾಯಕರ ಜೊತೆಗೂಡಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಬುಧವಾರ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…