ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶುರುವಾದ ವಿಚಾರಣೆ ಸಂಜೆ 4.30 ರವರೆಗೂ ನಡೆಯಿತು. ತನಿಖೆಗೆ ಸಹಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ವಿಚಾರಣೆಗೆ ಹಾಜರಾಗೋಕೆ ಹೇಳಿದ್ದ ಪರಿಣಾಮ ಇಂದು ನಾನೇ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದ್ದೇನೆ. ಮತ್ತೆ ಕೆಲ ದಾಖಲೆಗಳೊಂದಿಗೆ ಬರಲು ಹೇಳಿದ್ದಾರೆ. ಯಾವ ದಿನ ಬರಬೇಕು ಎಂದು ಹೇಳಿಲ್ಲ ಎಂದರು.
ಇನ್ನು ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಒಂದು ದಿನಾನೂ ಕರೆದಿಲ್ಲ. ಏನನ್ನೂ ಹೇಳಿಲ್ಲ. ಇವರು ನೋಡಿದ್ರೆ ಆಗಲೇ ಹಿಂಸೆ ಕೊಡೋಕೆ ಶುರು ಮಾಡಿದ್ದಾರೆ. ಯಾವೆಲ್ಲಾ ದಾಖಲೆಗಳು ಕೇಳಿದ್ದಾರೆ ಅನ್ನೋದನ್ನು ಹೇಳೋಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…