ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ ನಾಲ್ಕು ಲಕ್ಷ ಕೋಟಿ ರೂಗೂ ಅಧಿಕ ಸಾಲ ಮಾಡಿದ್ದಾರೆ. ಒಬ್ಬರ ತಲೆ ಮೇಲೆ ತಲಾ 80 ಸಾವಿರ ರೂ ಸಾಲದ ಹೊರೆ ಇದೆ. ಸಿಎಂ ಸಿದ್ದರಾಮಯ್ಯ ಸಾಲಗಾರ ಆಗಿದ್ದಾರೆ. ಉಪಚುನಾವಣೆ ನಂತರ ಜನರ ಮೇಲೆ ಎಲ್ಲಾ ತೆರಿಗೆ ಹಾಕುತ್ತಾರೆ. ಜನ ಕಾಂಗ್ರೆಸ್ ಸರ್ಕಾರಕ್ಕೆ ಈಗ ಬುದ್ದಿ ಕಲಿಸಬೇಕು ಎಂದು ಕರೆ ನೀಡಿದರು.





