ಬೆಳಗಾವಿ: ʼಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಮಾಜಿ ಸಚಿವರಾಗಲಿದ್ದಾರೆʼ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗಿದೆ. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ. ಆಪರೇಷನ್ ಕಮಲ ಎಲ್ಲವೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು. ಗ್ಯಾರಂಟಿ ಯೋಜನೆ ವಿಫಲ ಆಗಿದೆ. ಹೀಗಾಗಿ ಜನರ ದಿಕ್ಕು ಬದಲು ಮಾಡಲು ಈ ರೀತಿಯಲ್ಲಿ ಮಾಡುತ್ತಿದ್ದಾರೆʼʼ ಎಂದು ದೂರಿದರು.
ʼಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಅಪಾಯಕಾರಿʼ ಎಂದರು.
ಇನ್ನು ʼಬೆಳಗಾವಿ ರಾಜಕಾರಣ ಹಾಗೂ ಡಿಕೆಶಿಯಿಂದ ಸರಕಾರ ಬೀಳಲಿದೆʼ ಎಂದು ರಮೇಶ್ ಜಾರಕಿಹೊಳಿ ಭವಿಷ್ಯ ನುಡಿದರು.
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…
ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…
ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…
ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…