ಬೆಳಗಾವಿ: ʼಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಮಾಜಿ ಸಚಿವರಾಗಲಿದ್ದಾರೆʼ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗಿದೆ. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ. ಆಪರೇಷನ್ ಕಮಲ ಎಲ್ಲವೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು. ಗ್ಯಾರಂಟಿ ಯೋಜನೆ ವಿಫಲ ಆಗಿದೆ. ಹೀಗಾಗಿ ಜನರ ದಿಕ್ಕು ಬದಲು ಮಾಡಲು ಈ ರೀತಿಯಲ್ಲಿ ಮಾಡುತ್ತಿದ್ದಾರೆʼʼ ಎಂದು ದೂರಿದರು.
ʼಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಅಪಾಯಕಾರಿʼ ಎಂದರು.
ಇನ್ನು ʼಬೆಳಗಾವಿ ರಾಜಕಾರಣ ಹಾಗೂ ಡಿಕೆಶಿಯಿಂದ ಸರಕಾರ ಬೀಳಲಿದೆʼ ಎಂದು ರಮೇಶ್ ಜಾರಕಿಹೊಳಿ ಭವಿಷ್ಯ ನುಡಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…