ಬೆಳಗಾವಿ: ʼಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಮಾಜಿ ಸಚಿವರಾಗಲಿದ್ದಾರೆʼ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಿಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡಲಾಗಿದೆ. 2019ರಲ್ಲಿ ಡಿಕೆಶಿ ಸೊಕ್ಕು, ದುರಾಡಳಿತದಿಂದ ನಾವೆಲ್ಲ ಪಕ್ಷಾಂತರ ಮಾಡಿದ್ದೇವೆ. ಆಪರೇಷನ್ ಕಮಲ ಎಲ್ಲವೂ ನಡೆಯುತ್ತಿಲ್ಲ ಎಲ್ಲವೂ ಸುಳ್ಳು. ಗ್ಯಾರಂಟಿ ಯೋಜನೆ ವಿಫಲ ಆಗಿದೆ. ಹೀಗಾಗಿ ಜನರ ದಿಕ್ಕು ಬದಲು ಮಾಡಲು ಈ ರೀತಿಯಲ್ಲಿ ಮಾಡುತ್ತಿದ್ದಾರೆʼʼ ಎಂದು ದೂರಿದರು.
ʼಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಅಪಾಯಕಾರಿʼ ಎಂದರು.
ಇನ್ನು ʼಬೆಳಗಾವಿ ರಾಜಕಾರಣ ಹಾಗೂ ಡಿಕೆಶಿಯಿಂದ ಸರಕಾರ ಬೀಳಲಿದೆʼ ಎಂದು ರಮೇಶ್ ಜಾರಕಿಹೊಳಿ ಭವಿಷ್ಯ ನುಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…