ರಾಜ್ಯ

ಆದಷ್ಟು ಬೇಗ ಡಿಕೆಶಿ ಮುಖ್ಯಮಂತ್ರಿಯಾಗಲಿದ್ದಾರೆ: ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್ ಹೇಳಿಕೆ

ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಲಕ್ಷ್ಮೇಶ್ವರ ಮುಕ್ತಿ ಮಂದಿರ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಮಾತನಾಡಿದ ಅವರು,  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಅಭಿಮಾನಿ ಬಣದಲ್ಲಿ ಪರ-ವಿರೋಧಗಳು ಉಂಟಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಲಕ್ಷ್ಮೇಶ್ವರ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ನನೆಗುದಿಗೆ ಬಿದ್ದಿದೆ. ಇದಕ್ಕೆಲ್ಲಾ ಸುಮಾರು 15 ಕೋಟಿ ರೂ.ಗಳಷ್ಟು ವೆಚ್ಚವಾಗುತ್ತದೆ. ಅಲ್ಲದೇ ಶ್ರೀಮಠ ಮಗನಾದ ಗಂಗಾಧರ ಶಿವಾಚಾರ್ಯರ ಆರ್ಶೀವಾದ ಪಡೆದ ವೇಳೆ ಡಿ.ಕೆ.ಶಿವಕುಮಾರ್‌ ಅವರಿಗೆ ತ್ರಿಕೋಟಿ ಲಿಂಗ ಸ್ಥಾಪನೆ ಬಗ್ಗೆ ಹೇಳಲಾಗಿದೆ. ಈ ಬಗ್ಗೆ ಶಿವಕುಮಾರ್‌ ಅವರು ಲಿಂಗ ಸ್ಥಾಪನೆಗೆ ಬೇಕಾಗುವ ಕೋಟ್ಯಂತರ ರೂಪಾಯಿಯನ್ನು ಅನುದಾನ ಮೂಲಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಮೊದಲ ಹಂತದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಆದರೆ, ಇದೀಗ ಕಾರಣಾಂತರಗಳಿಂದ ಸ್ವಲ್ಪ ತಡವಾಗಿದೆ. ಆದಷ್ಟು ಬೇಗ ಗುರುಗಳ ಸಂಕಲ್ಪ ಪೂರ್ಣಗೊಳಿಸೋಣ ಎಂದು ತಿಳಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಲಿ. ಆ ಬಳಿಕ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ನಂತರ ಮುಕ್ತಿ ಮಂದಿರಕ್ಕೆ ಕರೆದುಕೊಂಡು ಬಂದು ಈ ನಾಡಿಗೆ ತೋರಿಸೋಣ ಎಂದು ಹೇಳಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

3 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

3 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

4 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

5 hours ago