ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಲಕ್ಷ್ಮೇಶ್ವರ ಮುಕ್ತಿ ಮಂದಿರ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿ ಬಣದಲ್ಲಿ ಪರ-ವಿರೋಧಗಳು ಉಂಟಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಲಕ್ಷ್ಮೇಶ್ವರ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ನನೆಗುದಿಗೆ ಬಿದ್ದಿದೆ. ಇದಕ್ಕೆಲ್ಲಾ ಸುಮಾರು 15 ಕೋಟಿ ರೂ.ಗಳಷ್ಟು ವೆಚ್ಚವಾಗುತ್ತದೆ. ಅಲ್ಲದೇ ಶ್ರೀಮಠ ಮಗನಾದ ಗಂಗಾಧರ ಶಿವಾಚಾರ್ಯರ ಆರ್ಶೀವಾದ ಪಡೆದ ವೇಳೆ ಡಿ.ಕೆ.ಶಿವಕುಮಾರ್ ಅವರಿಗೆ ತ್ರಿಕೋಟಿ ಲಿಂಗ ಸ್ಥಾಪನೆ ಬಗ್ಗೆ ಹೇಳಲಾಗಿದೆ. ಈ ಬಗ್ಗೆ ಶಿವಕುಮಾರ್ ಅವರು ಲಿಂಗ ಸ್ಥಾಪನೆಗೆ ಬೇಕಾಗುವ ಕೋಟ್ಯಂತರ ರೂಪಾಯಿಯನ್ನು ಅನುದಾನ ಮೂಲಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮೊದಲ ಹಂತದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಆದರೆ, ಇದೀಗ ಕಾರಣಾಂತರಗಳಿಂದ ಸ್ವಲ್ಪ ತಡವಾಗಿದೆ. ಆದಷ್ಟು ಬೇಗ ಗುರುಗಳ ಸಂಕಲ್ಪ ಪೂರ್ಣಗೊಳಿಸೋಣ ಎಂದು ತಿಳಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿ. ಆ ಬಳಿಕ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ನಂತರ ಮುಕ್ತಿ ಮಂದಿರಕ್ಕೆ ಕರೆದುಕೊಂಡು ಬಂದು ಈ ನಾಡಿಗೆ ತೋರಿಸೋಣ ಎಂದು ಹೇಳಿದ್ದಾರೆ.
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…
ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…