ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಲಕ್ಷ್ಮೇಶ್ವರ ಮುಕ್ತಿ ಮಂದಿರ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿ ಬಣದಲ್ಲಿ ಪರ-ವಿರೋಧಗಳು ಉಂಟಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಲಕ್ಷ್ಮೇಶ್ವರ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ನನೆಗುದಿಗೆ ಬಿದ್ದಿದೆ. ಇದಕ್ಕೆಲ್ಲಾ ಸುಮಾರು 15 ಕೋಟಿ ರೂ.ಗಳಷ್ಟು ವೆಚ್ಚವಾಗುತ್ತದೆ. ಅಲ್ಲದೇ ಶ್ರೀಮಠ ಮಗನಾದ ಗಂಗಾಧರ ಶಿವಾಚಾರ್ಯರ ಆರ್ಶೀವಾದ ಪಡೆದ ವೇಳೆ ಡಿ.ಕೆ.ಶಿವಕುಮಾರ್ ಅವರಿಗೆ ತ್ರಿಕೋಟಿ ಲಿಂಗ ಸ್ಥಾಪನೆ ಬಗ್ಗೆ ಹೇಳಲಾಗಿದೆ. ಈ ಬಗ್ಗೆ ಶಿವಕುಮಾರ್ ಅವರು ಲಿಂಗ ಸ್ಥಾಪನೆಗೆ ಬೇಕಾಗುವ ಕೋಟ್ಯಂತರ ರೂಪಾಯಿಯನ್ನು ಅನುದಾನ ಮೂಲಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮೊದಲ ಹಂತದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಆದರೆ, ಇದೀಗ ಕಾರಣಾಂತರಗಳಿಂದ ಸ್ವಲ್ಪ ತಡವಾಗಿದೆ. ಆದಷ್ಟು ಬೇಗ ಗುರುಗಳ ಸಂಕಲ್ಪ ಪೂರ್ಣಗೊಳಿಸೋಣ ಎಂದು ತಿಳಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿ. ಆ ಬಳಿಕ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ನಂತರ ಮುಕ್ತಿ ಮಂದಿರಕ್ಕೆ ಕರೆದುಕೊಂಡು ಬಂದು ಈ ನಾಡಿಗೆ ತೋರಿಸೋಣ ಎಂದು ಹೇಳಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…