ರಾಜ್ಯ

ಎರಡನೇ ಬಾರಿಗೆ ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ. ಸುರೇಶ್‌ರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ.

ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ. ಸುರೇಶ್‍ರವರ ಸಹೋದರಿ ಎಂದು ಹೇಳಿಕೊಂಡಿದ್ದರು. ನಟರೊಬ್ಬರು ಡಿ.ಕೆ. ಸುರೇಶ್‍ರವರ ಧ್ವನಿಯನ್ನು ಮಿಮಿಕ್ರಿ ಮಾಡಿ ಉದ್ಯಮಿಗಳ ಜೊತೆ ಮಾತನಾಡಿದ್ದರು. ಬಹುಕೋಟಿ ಹಗರಣವನ್ನು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಡಿ.ಕೆ.ಸುರೇಶ್‍ರವರಿಗೆ ನೋಟೀಸ್ ನೀಡಿತ್ತು.

ಕಳೆದ ಜೂ.23 ರಂದು ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗಿದ್ದರು. ಮತ್ತಷ್ಟು ಮಾಹಿತಿ ಸಂಗ್ರಹಕ್ಕಾಗಿ ಜಾರಿ ನಿರ್ದೇಶನಾಲಯ ಎರಡನೇ ಬಾರಿ ನೋಟೀಸ್ ನೀಡಿದ್ದು, ಅದರಂತೆ ಇಂದು ಡಿ.ಕೆ. ಸುರೇಶ್ ವಿಚಾರಣೆಗೆ ಹಾಜರಾಗಿದ್ದರು. ಅವರ ಜೊತೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತಿತರರು ಹಾಜರಿದ್ದರು.

ಆದರೆ ಎಲ್ಲರನ್ನೂ ಹೊರಗಿರಿಸಿ ಡಿ.ಕೆ. ಸುರೇಶ್‍ರವರನ್ನು ಮಾತ್ರ ಕಚೇರಿ ಒಳಗೆ ಕರೆದುಕೊಂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ. ಹಲವು ರೀತಿಯ ಪ್ರಶ್ನೆಗಳನ್ನು ಡಿ.ಕೆ.ಸುರೇಶ್‍ಗೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಐಶ್ವರ್ಯಗೌಡ ಅವರ ವಂಚನೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಡಿ.ಕೆ. ಸುರೇಶ್ ಹಲವಾರು ಬಾರಿ ಪ್ರಸ್ತಾಪಿಸಿದ್ದಾರೆ. ಆಕೆಯ ವಿರುದ್ಧ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಡಿ.ಕೆ.ಸುರೇಶ್ ದೂರು ನೀಡಿದ್ದರು. ಅದರ ಹೊರತಾಗಿಯೂ ಜಾರಿ ನಿರ್ದೇಶನಾಲಯ ವಿಚಾರಣೆ ಮುಂದುವರೆಸಿದ್ದು, ಇಂದು ಕೂಡ ವಿಚಾರಣೆ ನಡೆಸಿದೆ.

ಆಂದೋಲನ ಡೆಸ್ಕ್

Recent Posts

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

15 mins ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

57 mins ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

1 hour ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

2 hours ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

2 hours ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

2 hours ago