D K Suresh
ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ. ಸುರೇಶ್ರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ.
ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ. ಸುರೇಶ್ರವರ ಸಹೋದರಿ ಎಂದು ಹೇಳಿಕೊಂಡಿದ್ದರು. ನಟರೊಬ್ಬರು ಡಿ.ಕೆ. ಸುರೇಶ್ರವರ ಧ್ವನಿಯನ್ನು ಮಿಮಿಕ್ರಿ ಮಾಡಿ ಉದ್ಯಮಿಗಳ ಜೊತೆ ಮಾತನಾಡಿದ್ದರು. ಬಹುಕೋಟಿ ಹಗರಣವನ್ನು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಡಿ.ಕೆ.ಸುರೇಶ್ರವರಿಗೆ ನೋಟೀಸ್ ನೀಡಿತ್ತು.
ಕಳೆದ ಜೂ.23 ರಂದು ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗಿದ್ದರು. ಮತ್ತಷ್ಟು ಮಾಹಿತಿ ಸಂಗ್ರಹಕ್ಕಾಗಿ ಜಾರಿ ನಿರ್ದೇಶನಾಲಯ ಎರಡನೇ ಬಾರಿ ನೋಟೀಸ್ ನೀಡಿದ್ದು, ಅದರಂತೆ ಇಂದು ಡಿ.ಕೆ. ಸುರೇಶ್ ವಿಚಾರಣೆಗೆ ಹಾಜರಾಗಿದ್ದರು. ಅವರ ಜೊತೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತಿತರರು ಹಾಜರಿದ್ದರು.
ಆದರೆ ಎಲ್ಲರನ್ನೂ ಹೊರಗಿರಿಸಿ ಡಿ.ಕೆ. ಸುರೇಶ್ರವರನ್ನು ಮಾತ್ರ ಕಚೇರಿ ಒಳಗೆ ಕರೆದುಕೊಂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ. ಹಲವು ರೀತಿಯ ಪ್ರಶ್ನೆಗಳನ್ನು ಡಿ.ಕೆ.ಸುರೇಶ್ಗೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಐಶ್ವರ್ಯಗೌಡ ಅವರ ವಂಚನೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಡಿ.ಕೆ. ಸುರೇಶ್ ಹಲವಾರು ಬಾರಿ ಪ್ರಸ್ತಾಪಿಸಿದ್ದಾರೆ. ಆಕೆಯ ವಿರುದ್ಧ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಡಿ.ಕೆ.ಸುರೇಶ್ ದೂರು ನೀಡಿದ್ದರು. ಅದರ ಹೊರತಾಗಿಯೂ ಜಾರಿ ನಿರ್ದೇಶನಾಲಯ ವಿಚಾರಣೆ ಮುಂದುವರೆಸಿದ್ದು, ಇಂದು ಕೂಡ ವಿಚಾರಣೆ ನಡೆಸಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…