ರಾಜ್ಯ

ಕೇಂದ್ರ ಬಜೆಟ್‌ 2025| ರಾಜ್ಯಕ್ಕೆ ಬೋಗಸ್‌, ಬಂಡಲ್‌ ಬಜೆಟ್‌ ಆಗಿದೆ: ಡಿ.ಕೆ.ಸುರೇಶ್‌

ರಾಮನಗರ: ಈ ಬಾರಿಯ ಕೇಂದ್ರ ಬಜೆಟ್‌ ಬಿಹಾರಕ್ಕೆ ಬಂಪರ್‌ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್‌ ಮತ್ತು ಬಂಡಲ್‌ ಬಜೆಟ್‌ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್‌ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದ್ದಾರೆ. ನಮ್ಮ ರಾಜ್ಯದಿಂದ 5 ಲಕ್ಷ ಕೋಟಿ ರೂ. ಅಧಿಕ ತೆರಿಗೆ ಕೇಂದ್ರದ ಖಾತೆಗೆ ಜಮಾ ಆಗುತ್ತಿದೆ. ಆದರೆ ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ಯೋಜನೆಗೆ ಅನುಮೋದನೆ ನೀಡಿಲ್ಲ. ಇದನ್ನು ಸರಿಪಡಿಸದಿದ್ದರೆ ಬಹುಶಃ ಅನುದಾನಕ್ಕಾಗಿ ಬೇರೆ ಬೇರೆ ರೀತಿಯಲ್ಲಿ ಆಗ್ರಹಿಸಬೇಕಾಗುತ್ತದೆ. ಬಳಿಕ ಕೇಂದ್ರಕ್ಕೆ ಅದನ್ನು ಕಷ್ಟವಾಗಬಹುದು. ಕೇಂದ್ರ ಸರ್ಕಾರಕ್ಕೆ ಕೇವಲ ಚುನಾವಣೆಯಷ್ಟೇ ಮುಖ್ಯ. ಅವರಿಗೆ ಅಭಿವೃದ್ಧಿ ವಿಚಾರ ಮುಖ್ಯ ಅಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಬಜೆಟ್‌ನಿಂದ ಮಧ್ಯಮ ವರ್ಗಕ್ಕೆ ಒಂದಿಷ್ಟು ತೆರಿಗೆ ವಿನಾಯಿತಿ ನೀಡಿದ್ದು, ರೈತರು, ಮಹಿಳೆಯರು, ಯುವಜನತೆ ಹಾಗೂ ದಲಿತರ ಹೆಸರು ಹೇಳಿದ್ದಾರೆ. ಆದರೆ ನೊಂದಿರುವ ಸಾರ್ವಜನಿಕರಿಗೆ ಯಾವ ರೀತಿಯ ಯೋಜನೆ ಮಾಡುತ್ತೇವೆ ಎಂದು ಹೇಳಿಲ್ಲ. ಹೀಗಾಗಿ ಕನ್ನಡಿಗರು ಎಚ್ಚೆತ್ತುಕೊಳ್ಳುವ ಕಾಲ ಹತ್ತಿರ ಬಂದಿದೆ. ಇದು ರಾಜಕೀಯ ಹೇಳಿಕೆ ಅಲ್ಲ. ಕನ್ನಡಿಗರು ಮಲಗಿದರೆ ನಮ್ಮನ್ನು ಮುಗಿಸುತ್ತಾರೆ. ಕರ್ನಾಟಕದ ನಿಮ್ಮ ಮಕ್ಕಳನ್ನು ಬೇರೆಯವರು ಆಳುವ ಸ್ಥಿತಿ, ಬೇರೆಯವರ ಹತ್ರ ಕೂಲಿ ಮಾಡುವ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

53 mins ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

1 hour ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

1 hour ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

1 hour ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

2 hours ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

2 hours ago