ರಾಜ್ಯ

ಕೇಂದ್ರ ಬಜೆಟ್‌ 2025| ರಾಜ್ಯಕ್ಕೆ ಬೋಗಸ್‌, ಬಂಡಲ್‌ ಬಜೆಟ್‌ ಆಗಿದೆ: ಡಿ.ಕೆ.ಸುರೇಶ್‌

ರಾಮನಗರ: ಈ ಬಾರಿಯ ಕೇಂದ್ರ ಬಜೆಟ್‌ ಬಿಹಾರಕ್ಕೆ ಬಂಪರ್‌ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್‌ ಮತ್ತು ಬಂಡಲ್‌ ಬಜೆಟ್‌ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್‌ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದ್ದಾರೆ. ನಮ್ಮ ರಾಜ್ಯದಿಂದ 5 ಲಕ್ಷ ಕೋಟಿ ರೂ. ಅಧಿಕ ತೆರಿಗೆ ಕೇಂದ್ರದ ಖಾತೆಗೆ ಜಮಾ ಆಗುತ್ತಿದೆ. ಆದರೆ ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ಯೋಜನೆಗೆ ಅನುಮೋದನೆ ನೀಡಿಲ್ಲ. ಇದನ್ನು ಸರಿಪಡಿಸದಿದ್ದರೆ ಬಹುಶಃ ಅನುದಾನಕ್ಕಾಗಿ ಬೇರೆ ಬೇರೆ ರೀತಿಯಲ್ಲಿ ಆಗ್ರಹಿಸಬೇಕಾಗುತ್ತದೆ. ಬಳಿಕ ಕೇಂದ್ರಕ್ಕೆ ಅದನ್ನು ಕಷ್ಟವಾಗಬಹುದು. ಕೇಂದ್ರ ಸರ್ಕಾರಕ್ಕೆ ಕೇವಲ ಚುನಾವಣೆಯಷ್ಟೇ ಮುಖ್ಯ. ಅವರಿಗೆ ಅಭಿವೃದ್ಧಿ ವಿಚಾರ ಮುಖ್ಯ ಅಲ್ಲ ಎಂದು ವಾಗ್ದಾಳಿ ನಡೆಸಿದರು.

ಈ ಬಜೆಟ್‌ನಿಂದ ಮಧ್ಯಮ ವರ್ಗಕ್ಕೆ ಒಂದಿಷ್ಟು ತೆರಿಗೆ ವಿನಾಯಿತಿ ನೀಡಿದ್ದು, ರೈತರು, ಮಹಿಳೆಯರು, ಯುವಜನತೆ ಹಾಗೂ ದಲಿತರ ಹೆಸರು ಹೇಳಿದ್ದಾರೆ. ಆದರೆ ನೊಂದಿರುವ ಸಾರ್ವಜನಿಕರಿಗೆ ಯಾವ ರೀತಿಯ ಯೋಜನೆ ಮಾಡುತ್ತೇವೆ ಎಂದು ಹೇಳಿಲ್ಲ. ಹೀಗಾಗಿ ಕನ್ನಡಿಗರು ಎಚ್ಚೆತ್ತುಕೊಳ್ಳುವ ಕಾಲ ಹತ್ತಿರ ಬಂದಿದೆ. ಇದು ರಾಜಕೀಯ ಹೇಳಿಕೆ ಅಲ್ಲ. ಕನ್ನಡಿಗರು ಮಲಗಿದರೆ ನಮ್ಮನ್ನು ಮುಗಿಸುತ್ತಾರೆ. ಕರ್ನಾಟಕದ ನಿಮ್ಮ ಮಕ್ಕಳನ್ನು ಬೇರೆಯವರು ಆಳುವ ಸ್ಥಿತಿ, ಬೇರೆಯವರ ಹತ್ರ ಕೂಲಿ ಮಾಡುವ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago