ರಾಜ್ಯ

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು ದೃಶ್ಯಗಳ ಬಗ್ಗೆ ಬಿಸಿಬಿಸಿ ಚರ್ಚೆ ಒಂದೆಡೆಯಾಗುತ್ತಿದ್ದರೆ, ಅದರಲ್ಲಿ ಹೀರೋ ಯಶ್ ಹೇಳುವ ಡ್ಯಾಡಿ ಈಸ್ ಹೋಂ ಡೈಲಾಗ್ ಭಾರೀ ಫೇಮಸ್ ಆಗಿದೆ.

ಇದೀಗ ಟಾಕ್ಸಿಕ್ ಸಿನಿಮಾ ಟೀಸರ್ ಮಾದರಿಯಲ್ಲಿಯೇ ಮಾಜಿ ಸಿಎಂ ಕೇಂದ್ರ ಸಚಿವ ಎಚ್‍ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ AI ಮೂಲಕ ವಿಡಿಯೋ ಒಂದನ್ನು ಎಡಿಟ್ ಮಾಡಿ ಹರಿ ಬಿಟ್ಟಿದ್ದು, ಭಾರಿ ವೈರಲ್ ಆಗಿದೆ. ಇಲ್ಲಿ ಡೈಲಾಗ್ ರಾಜ್ಯ ರಾಜಕಾರಣಕ್ಕೆ, 2028ರ ಚುನಾವಣೆಗೆ ಸಂಬಂಧಿಸಿ ಇದೆ.

ಎಐ ಸೃಷ್ಟಿತ ವಿಡಿಯೊದಲ್ಲಿ ನಾವು ಈ ರಾಜ್ಯವನ್ನು ಶಾಂತಿಯುತವಾಗಿ ಲೂಟಿ ಮಾಡಲು ಬಯಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರೆ, ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯಕ್ಕೆ ಮರಳುತ್ತಾರೆಂದು ನಿಮಗೆ ಅನಿಸುತ್ತಿದೆಯೇ ಎಂದು ಕೇಳುತ್ತಾರೆ. ಆಗ ಡಿಕೆ ಶಿವಕುಮಾರ್ ನನಗನ್ನಿಸುವುದಿಲ್ಲ ಸರ್ ಎಂದಾಗ ಕಾರಿನಲ್ಲಿ ಎಚ್.ಡಿ ಕುಮಾರಸ್ವಾಮಿ ರಾಯಲ್ ಎಂಟ್ರಿ ಕೊಡ್ತಾರೆ. ಅವರು ಇಲ್ಲಿಗೆ ಬರಬಾರದಿತ್ತು ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ. ಕೊನೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಡ್ಯಾಡಿ ಇಸ್ ಹೋಂ ಎಂದು ಡೈಲಾಗ್ ಹೇಳುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್‌, ಜೆಡಿಎಸ್‌ ಬಿಜೆಪಿಯೊಂದಿಗೆ ವೀಲಿನವಾಗಲಿದೆ, ಕರ್ನಾಟಕದಲ್ಲಿ 2 ಪಕ್ಷಗಳು ಇರಲಿದೆ ಎಂಬ ಮಾತುಗಳನ್ನಾಡಿದ್ದರು. ಇದಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣದತ್ತ ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ. 2028 ರ ಮಹಾ ಕದನಕ್ಕೆ ದಿಲ್ಲಿ ಮಟ್ಟದಲ್ಲೇ ರಣತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

2 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

10 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

20 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago