ರಾಜ್ಯ

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು ದೃಶ್ಯಗಳ ಬಗ್ಗೆ ಬಿಸಿಬಿಸಿ ಚರ್ಚೆ ಒಂದೆಡೆಯಾಗುತ್ತಿದ್ದರೆ, ಅದರಲ್ಲಿ ಹೀರೋ ಯಶ್ ಹೇಳುವ ಡ್ಯಾಡಿ ಈಸ್ ಹೋಂ ಡೈಲಾಗ್ ಭಾರೀ ಫೇಮಸ್ ಆಗಿದೆ.

ಇದೀಗ ಟಾಕ್ಸಿಕ್ ಸಿನಿಮಾ ಟೀಸರ್ ಮಾದರಿಯಲ್ಲಿಯೇ ಮಾಜಿ ಸಿಎಂ ಕೇಂದ್ರ ಸಚಿವ ಎಚ್‍ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ AI ಮೂಲಕ ವಿಡಿಯೋ ಒಂದನ್ನು ಎಡಿಟ್ ಮಾಡಿ ಹರಿ ಬಿಟ್ಟಿದ್ದು, ಭಾರಿ ವೈರಲ್ ಆಗಿದೆ. ಇಲ್ಲಿ ಡೈಲಾಗ್ ರಾಜ್ಯ ರಾಜಕಾರಣಕ್ಕೆ, 2028ರ ಚುನಾವಣೆಗೆ ಸಂಬಂಧಿಸಿ ಇದೆ.

ಎಐ ಸೃಷ್ಟಿತ ವಿಡಿಯೊದಲ್ಲಿ ನಾವು ಈ ರಾಜ್ಯವನ್ನು ಶಾಂತಿಯುತವಾಗಿ ಲೂಟಿ ಮಾಡಲು ಬಯಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರೆ, ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯಕ್ಕೆ ಮರಳುತ್ತಾರೆಂದು ನಿಮಗೆ ಅನಿಸುತ್ತಿದೆಯೇ ಎಂದು ಕೇಳುತ್ತಾರೆ. ಆಗ ಡಿಕೆ ಶಿವಕುಮಾರ್ ನನಗನ್ನಿಸುವುದಿಲ್ಲ ಸರ್ ಎಂದಾಗ ಕಾರಿನಲ್ಲಿ ಎಚ್.ಡಿ ಕುಮಾರಸ್ವಾಮಿ ರಾಯಲ್ ಎಂಟ್ರಿ ಕೊಡ್ತಾರೆ. ಅವರು ಇಲ್ಲಿಗೆ ಬರಬಾರದಿತ್ತು ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ. ಕೊನೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಡ್ಯಾಡಿ ಇಸ್ ಹೋಂ ಎಂದು ಡೈಲಾಗ್ ಹೇಳುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್‌, ಜೆಡಿಎಸ್‌ ಬಿಜೆಪಿಯೊಂದಿಗೆ ವೀಲಿನವಾಗಲಿದೆ, ಕರ್ನಾಟಕದಲ್ಲಿ 2 ಪಕ್ಷಗಳು ಇರಲಿದೆ ಎಂಬ ಮಾತುಗಳನ್ನಾಡಿದ್ದರು. ಇದಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣದತ್ತ ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ. 2028 ರ ಮಹಾ ಕದನಕ್ಕೆ ದಿಲ್ಲಿ ಮಟ್ಟದಲ್ಲೇ ರಣತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

6 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

16 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago